Monday, May 25, 2026
Monday, May 25, 2026

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

Date:

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು ಅಹಿಂಸಾ ಧರ್ಮ ಪ್ರತಿಪಾದಕರಾದ ಭಗವಾನ್ ಶ್ರೀ ಮಹಾವೀರ ಜಯಂತಿಯ ಅಂಗವಾಗಿ ದಾರ್ಶನಿಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ವಿತರಿಸುವ ಮುಖಾಂತರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ ಮಾತನಾಡಿ ಭಗವಾನ್ ಶ್ರೀ ಮಹಾವೀರರ ಜನನದ ಸಮಯದಲ್ಲಿ, ದೇಶದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಪರಿಸ್ಥಿತಿ ಅತ್ಯಂತ ಅನಿಶ್ಚಿತವಾಗಿತ್ತು.

ಮಹಿಳೆಯರು ಮತ್ತು ಕೆಳವರ್ಗದವರನ್ನು ದಮನಿಸಲಾಗುತ್ತಿತ್ತು. ಧರ್ಮದ ಸ್ವರೂಪವು ಬಾಹ್ಯ ಆಡಂಬರ ಮತ್ತು ಪ್ರದರ್ಶನದಲ್ಲಿ ಸಿಲುಕಿಕೊಂಡಿತ್ತು ಮತ್ತು ಜಾತಿವಾದದ ಪ್ರಭಾವವು ಬೆಳೆಯುತ್ತಿತ್ತು.

ಅಂತಹ ಸಮಯದಲ್ಲಿ, ಭಗವಾನ್ ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರಾಗಿ ಇಡೀ ಜಗತ್ತಿಗೆ ಅಹಿಂಸಾ ಧರ್ಮವನ್ನು ಪ್ರತಿಪಾದಿಸುತ್ತ ಎಲ್ಲರೂ ಸಹಬಾಳ್ವೆ, ಸಹಕಾರ ಸೇವಾಮನೋಭಾವದ ಜೀವನವನ್ನು ನಡೆಸಬೇಕೆಂದು ಸಾರಿದರು. ಇಂತಹ ಮಹಾನ್ ದಾರ್ಶನಿಕರ ಜೀವನ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಉತ್ತಮ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಗೌರವ ಸಂಚಾಲಕರಾದ ಸಿ ರವಿ, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್‌.ಪಿ. ಗಿರೀಶ್, ಮದನ್ ಸಿಂಗ್, ಮಹೇಂದ್ರ ಜೈನ್, ರಾಜೇಶ್ ಮಂದಾರ, ಆಚಾರಿ ಗೋಪಿ, ಟಿ ಗುರುಪ್ರಸಾದ್, ಕೆ ಎಲ್ ಪವನ್, ರಜನಿಕಾಂತ್, ಆರ್ ಕಿರಣ್, ಕೇಬಲ್ ಲೋಕೇಶ್, ಜಯಪ್ರಕಾಶ್, ಸುಬ್ರಮಣಿ, ನಂದನ್, ಶ್ರೀಕಾಂತ್, ರಾಘವೇಂದ್ರ, ಮನ್ವಿಕ್ ಜೈನ್ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...