Monday, May 25, 2026
Monday, May 25, 2026

ಉಪನ್ಯಾಸಕ ಸುರೇಶ್ ಅವರ ದಾರುಣ ಮರಣ.ಸುಟ್ಟು ಕರುಕಲಾದ ಸ್ಥಿತಿಯಲ್ಲಿ ದೇಹ ಪತ್ತೆ

Date:

ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ಮನೆಯಿಂದ ಹೊರಟಿದ್ದ ಶಿವಕುಮಾ‌ರ್ ಅವರು ಮನೆಯವರಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ.

ಆದರೆ, ಭಾನುವಾರ ಬೆಳಿಗ್ಗೆ ಅವರದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಮತ್ತು ಬ್ಯಾಗ್‌’ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...