Monday, May 25, 2026
Monday, May 25, 2026

DC Shivamogga ಭಾರತ ಜನಗಣತಿ – 2027 ಅಂಗವಾಗಿ ರಾಜ್ಯದಲ್ಲಿ ” ಮನೆಗಳ ಪಟ್ಟಿ & ಮನೆ ಗಣತಿ ಕಾರ್ಯ ಏಪ್ರಿಲ್ 16 ರಿಂದ ಮೇ 15 ವರೆಗೆ ನಡೆಯಲಿದೆ

Date:

DC Shivamogga ಭಾರತದ ಜನಗಣತಿ-2027ರ ಅಂಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಪ್ರಕ್ರಿಯೆಯು ದಿನಾಂಕ 16.04.2026 ರಿಂದ 15.05.2026 ರವೆರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ದಿ: 1-04-2026 ರಿಂದ 15-04-2026 ರವರೆಗೆ
‘ಸ್ವಯಂ ಗಣತಿ’ ಆಯ್ಕೆ ಲಭ್ಯವಿದೆ.
ಸ್ವಯಂ ಗಣತಿ ಮಾಡುವ ವಿಧಾನ:
ಅಧಿಕೃತ ಪೋರ್ಟಲ್‌ನಲ್ಲಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು.
ನಿಮ್ಮ ಸ್ಥಳವನ್ನು ಆಯ್ಕೆ ಮಾಡಿ, ನಕ್ಷೆಯಲ್ಲಿ ಮನೆಯನ್ನು ಗುರುತಿಸುವುದು.
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವುದು.
ಸಲ್ಲಿಕೆಯ ನಂತರ ಲಭಿಸುವ SE ID(ಎಸ್ಇ ಐಡಿ) ಅನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು. ಹಾಗೂ ಗಣತಿದಾರರು ಭೇಟಿ ನೀಡಿದಾಗ ಅವರಿಗೆ ತೋರಿಸಬೇಕು.
DC Shivamogga ಗಣತಿದಾರರು ಮತ್ತು ಮೇಲ್ವಿಚಾರಕರ ಕ್ಷೇತ್ರ ಭೇಟಿ :
ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡವರು ತಮ್ಮಲ್ಲಿರುವ ಎಸ್ ಇ‌ ಐಡಿ ಅನ್ನು ಗಣತಿದಾರರಿಗೆ ತೋರಿಸಿ ದತ್ತಾಂಶವನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಸ್ವಯಂ ಗಣತಿ ಮಾಡದಿದ್ದಲ್ಲಿ, ಗಣತಿದಾರರೇ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಸಾರ್ವಜನಿಕರು, ಅಧಿಕಾರಿಗಳು, ಮತ್ತು ಸಿಬ್ಬಂದಿಗಳು https://se.census.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಸ್ವಯಂ‌ ಗಣತಿಯಲ್ಲಿ ಭಾಗವಹಿಸುಂತೆ ಜಿಲ್ಲಾಡಳಿತ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತಾಲೂಕು ಆಡಳಿತ, ಸ್ಥಳೀಯ ಸಂಸ್ಥೆ ಅಥವಾ ಜಿಲ್ಲಾಡಳಿತದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...