Monday, August 24, 2026
Monday, August 24, 2026

ಶಿವಮೊಗ್ಗದಲ್ಲಿ ವಿಶಿಷ್ಟವಾಗಿ ನಡೆದ ವಿದ್ಯಾ ಸಂಗಮ

Date:

ನ್ಯೂಸ್ 18 ನೆಟ್ ವರ್ಕ್ ಮತ್ತು Ad6 advertising ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 4ರ ಶನಿವಾರದಂದು ಶಿವಮೊಗ್ಗದ ಪೊಲೀಸ್ ಸಭಾಭವನದಲ್ಲಿ ನಡೆದ ವಿದ್ಯಾ ಸಂಗಮ ಕಾರ್ಯಕ್ರಮದಲ್ಲಿ ಎಂಡಿಎಫ್ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ರಾಜ್ಯದ ನಾನಾ ಭಾಗಗಳಿಂದ ಸುಮಾರು 35ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಭಾಗವಹಿಸಿದ್ದವು. ವಿವಿಧ ಪದವಿಗಳ , ಉನ್ನತ ಶಿಕ್ಷಣದ ಸಂಸ್ಥೆಗಳು ಪ್ರತಿನಿಧಿಗಳು ಭಾಗವಹಿಸಿ ಸ್ನಾತಕೋತ್ತರ ಪದವಿ ಶಿಕ್ಷಣದ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ವಿಜ್ಞಾನದ ವಿದ್ಯಾರ್ಥಿಗಳಿಗೆ ಸಿಇಟಿ ಮಾಕ್ ಟೆಸ್ಟ್ ನಡೆಸಲಾಯಿತು. ಎಲ್ ಬಿ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಹಾಲಿ ಎಂ ಡಿ ಎಫ್ ನಿರ್ದೇಶಕರಾಗಿರುವ ನ್ಯೂಸ್ 18 ನೆಟ್ವರ್ಕ್ ನ ಎಡಿಟೋರಿಯಲ್ ಚೀಫ್ ದಕ್ಷಿಣ ಭಾರತದ ಮುಖ್ಯಸ್ಥ ಡಿ.ಪಿ.ಸತೀಶ್ , ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ ಎಚ್ ಎಮ್ ಶಿವಕುಮಾರ್ ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾಲೇಜಿನ ಪ್ರಾಚಾರ್ಯರಾದ ಡಾ ಜಗದೀಶ್ ಎಂ ಭಂಡಾರಿ ಅವರುಗಳ ಮಾರ್ಗದರ್ಶನದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನ್ಯೂ ಸ್ 18 ಜಿಲ್ಲಾ ವರದಿಗಾರ ವಿನಯ್ ಪುರದಾಳು ಉಪನ್ಯಾಸಕ ವರ್ಗದ ಶ್ರೀಮತಿ ರೇಖಾ ಜಿ, ಕುಮಾರಿ ಶಾರಿಕಾ ಮತ್ತು ಅನುಷಾ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...