Sharada Pooryanayak ಶಿವಮೊಗ್ಗ ತಾಲೂಕು ಹೊಳಲೂರು, ಆಯನೂರು ಹಾಗೂ ಹೊಳೆಹೊನ್ನೂರಿನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರನ್ನು ಅವೈಜ್ಞಾನಿಕವಾಗಿ ವರ್ಗಾವಣೆ ಮಾಡಿದ್ದು ಇದನ್ನ ಖಂಡಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ವತಿಯಿಂದ ಇಂದು ಶಿವಮೊಗ್ಗ ಜಿಲ್ಲಾ ಡಿಸಿ ಕಚೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಹಾಗೂ ಕಾರ್ಯನಿರ್ವಹಿಸುತ್ತಿದ್ದ ವೈದ್ಯರನ್ನು ಮರು ನಿಯೋಜನೆ ಮಾಡುವಂತೆ ಮನವಿ ಪತ್ರವನ್ನು ಡಿಸಿ ಅವರಿಗೆ ಜೆಡಿಎಸ್ ಪಕ್ಷದ ಮುಖಂಡರ ಸಮ್ಮುಖದಲ್ಲಿ ನೀಡಲಾಯಿತು.
Sharada Pooryanayak ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಾಮಕೃಷ್ಣರವರು, ಜೆಡಿಎಸ್ ಗ್ರಾಮಾಂತರದ ಅಧ್ಯಕ್ಷರಾದ ಕಾಸೆಟ್ಟಿ ಸತೀಶ್ ರವರು,ಜೆಡಿಎಸ್ ಗ್ರಾಮಾಂತರದ ಕಾರ್ಯಾಧ್ಯಕ್ಷರಾದ ಸೋಮಿನಕೊಪ್ಪ ಕಾಂತರಾಜ್ ಅವರು ಹಾಗೂ ಜೆಡಿಎಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
