ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆವಟೂರಿನಲ್ಲಿ
ಕಾಡು ಹಂದಿಗೆ ಅಡಿಕೆಯಲ್ಲಿ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಗೆ ಗಾಯವಾಗಿರುವ ಘಟನೆ ನಡೆದಿದೆ.
ಹಂದಿ ಶಿಕಾರಿ ಮಾಡಲು ಇಟ್ಟಿದ್ದ ಸಿಡಿಯುವ ಕಚ್ಚಾ ಬಾಂಬ್ ಸಿಡಿದು ಮಹಿಳೆ
ಕೈಯ ಐದು ಬೆರಳುಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ.
ತೋಟದಲ್ಲಿ ಹಂದಿ ಶಿಕಾರಿ ಮಾಡಲು ಅಡಿಕೆ ಒಳಗೆ ಇಟ್ಟಿದ್ದ ಕಚ್ಚಾ ಬಾಂಬ್ ಅನ್ನು
ನಾಯಿ ಕಚ್ಚಿಕೊಂಡು ಮನೆಯ ಅಂಗಳಕ್ಕೆ ತಂದಿದೆ.
ಅದನ್ನು ಮುಟ್ಟಿದ ಕಮಲಮ್ಮ ಅವರ ಕೈ ಸಂಪೂರ್ಣ ಸುಟ್ಟು ಗಾಯಗಳಾಗಿವೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
