Monday, August 24, 2026
Monday, August 24, 2026

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಾಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Date:

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ ಸಂಗೀತವಿರಬೇಕು. ಸಂಗೀತದಿಂದ ಖಿನ್ನತೆ ದೂರವಾಗುತ್ತದೆ ಹಾಗೂ ಜೀವನೋತ್ಸಾಹ ಮೂಡುತ್ತದೆ. ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್.ಮಂಜುನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆಯಿಂದ ಆಯೋಜಿಸಿದ್ದ ಗಾಯನ ಸಮ್ಮಿಲನ 2 ಕಾರ್ಯಕ್ರಮದಲ್ಲಿ ಮಾತನಾಡಿ, ಸುಮಧುರವಾದ ಸಂಗೀತ ಆಲಿಸುವಿಕೆಯು ಮನಸ್ಸನ್ನು ಮುದ ಗೊಳಿಸುವದರ ಜೊತೆಗೆ ಸಂತೋಷಗೊಳಿಸುತ್ತದೆ. ಸಂಗೀತ ಕಲಿಯುವುದರಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಶಿಕ್ಷಕರು ಕಾಲಕಾಲಕ್ಕೆ ಈ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚಿತ್ರಗೀತೆ, ಭಾವಗೀತೆ ಹಾಗೂ ಜಾನಪದ ಗೀತೆಗಳನ್ನು ಹಾಡಬೇಕು. ಇಂತಹ ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕ ಎಂದರು.
, ಸಂಗೀತ ಆಸಕ್ತರು ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ಮಾಡಬೇಕು. ಜೀವನ ಸುಂದರಗೊಳಿಸಲು ಸಂಗೀತ ನೆರವಾಗುತ್ತದೆ ಎಂದು ಹೇಳಿದರು.
Chamber of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತ ಆಲಿಸುವುದರಿಂದ ಮನಸ್ಸು ಸಂತಸಗೊಂಡು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಸಂಗೀತ ಮನುಷ್ಯನ ಮನಸ್ಸಿಗೆ ಮತ್ತು ತರುವ ದಿವ್ಯ ಔಷದ. ಸಂಗೀತಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಎಂದು ತಿಳಿಸಿದರು.
ಎಸ್.ಆರಮಂಜುನಾಥ್ ಹಾಗೂ ಜಿ.ವಿಜಯಕುಮಾರ್. ಶ್ರೀಮತಿ ಶಶಿರೇಖಾ. ಕುಬೇರ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆ ಸಂಸ್ಥಾಪಕ, ಆಯೋಜಕರಾದ ಶಿಕ್ಷಕ ಬಿ.ಕುಬೇರ್ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಕೆ.ಕೆ.ಶಶಿರೇಖಾ ವಂದನಾರ್ಪಣೆ ನಡೆಸಿಕೊಟ್ಟರು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕಿ ಸುಮ ಪರಶುರಾಮ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...