Monday, May 25, 2026
Monday, May 25, 2026

Rotary Club Shivamogga ಷೇರು ಹೂಡಿಕೆಗಳಲ್ಲಿ ಜಾಗ್ರತೆ.ಅನಧೀಕೃತ ಕಂಪೆನಿಗಳಲ್ಲಿ ಹಣ ತೊಡಗಿಸಬೇಡಿ- ಹಣಕಾಸು ಸಲಹೆಗಾರ ಆನಂದ್

Date:

Rotary Club Shivamogga ಸಾರ್ವಜನಿಕರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಹಣಕಾಸು ಸಲಹೆಗಾರ ಕೆ.ಆನಂದ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಪೂರ್ವದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಣಕಾಸು ವಿಷಯ ಕುರಿತು ಉಪನ್ಯಾಸದಲ್ಲಿ ಮಾತನಾಡಿ, ಮೊದಲು ಜಾಲತಾಣಗಳಲ್ಲಿ ಹಣವನ್ನು ತೊಡಗಿಸಬಾರದು. ಯಾವುದೇ ಷೇರುಗಳ ಮೇಲೆ ಹಣ ಹೂಡಿಕೆ ಮಾಡುವಾದ ಅಲ್ಪ ಮೊತ್ತ ತೊಡಗಿಸಬೇಕು. ಯಾವುದೇ ಅನಧಿಕೃತ ಸಂಸ್ಥೆಗಳಲ್ಲಿ ಹಣವನ್ನ ತೊಡಗಿಸಬಾರದು ಎಂದು ತಿಳಿಸಿದರು.

ಹಣ ತೊಡಗಿಸುವ ಮುನ್ನ ಕೆಲವೊಂದು ಹಣಕಾಸು ಸಲಹೆಗಾರರನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು. ಷೇರುಗಳ ಮೇಲೆ ತೊಡಗಿಸುವಾಗ ಕಂಪನಿಯ ವಿವರಗಳನ್ನು ಪಡೆದು ಹಾಗೂ ಆರ್‌ಡಿಎ ರೆಗುಲೇಶನ್ ಆಕ್ಟ್ ಕಂಪನಿ ಹೊಂದಿದೆಯಾ ಎಂಬ ಅಂಶವನ್ನು ತಿಳಿದುಕೊಳ್ಳಬೇಕು. ನಂತರ ಹಣ ಹೂಡಿಕೆ ಮಾಡಬೇಕು. ಬರೀ ಲಾಭಕ್ಕೋಸ್ಕರ ಹಣವನ್ನು ತೊಡಗಿಸಿದರೆ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದರು.

ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಷೇರುಗಳು ಮತ್ತು ಮ್ಯೂಚುಯಲ್ ಫಂಡ್‌ನಲ್ಲಿ ಹಣ ಹೂಡಿಕೆ ಮಾಡುವ ಮುನ್ನ ಹೆಚ್ಚಿನ ಮಾಹಿತಿ ಹೊಂದಬೇಕು. ಕಷ್ಟಪಟ್ಟು ದುಡಿದ ಹಣದ ಬಗ್ಗೆ ಗಮನ ಇರಬೇಕು. ಹೆಚ್ಚು ಬಡ್ಡಿಗೋಸ್ಕರ ಹಣವನ್ನು ಬೇರೆಯವರಿಗೆ ಸಾಲ ನೀಡಿದರೆ ಹಣದ ವಾಪಸ್ ಸಿಗುವ ಬಗ್ಗೆ ಯಾವುದೇ ಖಾತರಿ ಇರುವುದಿಲ್ಲ ಎಂದು ತಿಳಿಸಿದರು.

ಹಣಕಾಸು ಸಲಹೆಗಾರ ಎಸ್.ಎನ್.ಸಂಜೀವ್ ಮಾತನಾಡಿ, ಯಾವುದೇ ಮ್ಯೂಚುಯಲ್ ಫಂಡ್, ಷೇರು ಹೂಡಿಕೆ ಮಾಡುವುದು ಹಾಗೂ ಸಾಲ ಕೊಡುವ ಸಂದರ್ಭಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಅಧಿಕೃತ ಸಂಸ್ಥೆಗಳಲ್ಲಿ ಹಣವನ್ನು ತೊಡಗಿಸುವುದು ಸೂಕ್ತ ಎಂದು ಹೇಳಿದರು.

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಹಕಾರ್ಯದರ್ಶಿ ಡಾ. ಎಂ.ಎಸ್.ಅರುಣ್ ಮಾತನಾಡಿ, ಕಷ್ಟಪಟ್ಟು ದುಡಿದ ಹಣವನ್ನು ತೊಡಗಿಸುವಾಗ ಜಾಗೃತ ಆಗಿರುವ ಜೊತೆಗೆ ಹಣಕಾಸು ಸಲಹೆಗಾರರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು. ನಂತರ ಹಣವನ್ನು ತೊಡಗಿಸುವುದು ಸೂಕ್ತ ಎಂದು ತಿಳಿಸಿದರು.

ರೋಟರಿ ಶ್ರೀಕಾಂತ್, ನಿಯೋಜಿತ ಸೇನಾನಿ ಎ.ಒ.ಮಹೇಶ್, ಕೇಶವಪ್ಪ, ಅರುಣ್ ದೀಕ್ಷಿತ್, ಗಣೇಶ್, ಶ್ರೀನಿವಾಸ್ ಗೌಡ, ಸುರೇಶ್, ಪರಮೇಶ್ವರಿ, ಗಂಗಪ್ಪ, ವೀಣಾ ಕಿಶೋರ್, ಕೀರ್ತನ, ನಿಯೋಜಿತ ಅಧ್ಯಕ್ಷ ಶೇಷಗಿರಿ.ಡಿ.ಕೆ ಮತ್ತು ನಿಯೋಜಿತ ಖಜಾಂಚಿ ಎಸ್.ಸುನೀಲ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...