Tuesday, April 7, 2026
Tuesday, April 7, 2026

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು, ಹೋರಾಟ ಸಮಿತಿಯ ಪ್ರಮುಖರು ಹಾಗೂ ಸಾವಿರಾರು ಸಾರ್ವಜನಿಕರೊಂದಿಗೆ ಪಾಲ್ಗೊಂಡು ಜನರ ಭಾವನೆಗಳಿಗೆ ಸಾಕ್ಷಿಯಾಗಲಾಯಿತು. ಈ ಪವಿತ್ರ ಹೋರಾಟದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಹೊಸನಗರದ ಸ್ವಾಭಿಮಾನದ ಧ್ವನಿಗೆ ಬೆಂಬಲ ಸೂಚಿಸಲಾಯಿತು.

ಹೊಸನಗರಕ್ಕೆ ತನ್ನದೇ ಆದ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು ಎಂಬುದು ಈ ಭಾಗದ ಪ್ರತಿಯೊಬ್ಬರ ಆಶಯವಾಗಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಹಾಗೂ ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ಮುಂದೆ ಸೂಕ್ತವಾಗಿ ಪ್ರಸ್ತಾವನೆ ಸಲ್ಲಿಸಿ, ನ್ಯಾಯ ಒದಗಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಜನರ ಈ ಒಕ್ಕೊರಲ ಧ್ವನಿಗೆ ನಾವು ಸದಾ ಜೊತೆಯಾಗಿರುತ್ತೇವೆ ಎಂದರು.
B.Y. Raghavendra ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಶ್ರೀ ಮ.ನಿ.ಪ್ರ ಅಭಿನವ ಚನ್ನಬಸವ ಶ್ರೀಗಳು, ಹುಂಚ ಜೈನ ಮಠದ ಶ್ರೀ ಶ್ರೀ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಶ್ರೀಗಳು, ನಾರಾಯಣಗುರು ಸಂಸ್ಥಾನ ಮಠದ ಶ್ರೀ ಶ್ರೀ ರೇಣುಕಾನಂದ ಶ್ರೀಗಳು, ಮುಸ್ಲಿಂ ಧರ್ಮ ಗುರುಗಳು, ಹೋರಾಟದ ರುವಾರಿಗಳು ಮಾಜಿ ಶಾಸಕರಾದ ಶ್ರೀ ಬಿ.ಸ್ವಾಮಿರಾವ್, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ, ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಬೇಳೂರು ಗೋಪಾಲ ಕೃಷ್ಣ, ಮಾಜಿ ಸಚಿವರಾದ ಶ್ರೀ ಹರತಾಳು ಹಾಲಪ್ಪ, ಶ್ರೀ ವೀರೇಶ್ ಆಲವಳ್ಳಿ, ಶ್ರೀ ಕಲಗೋಡು ರತ್ನಾಕರ್, ಶ್ರೀ ಎನ್ ಆರ್ ದೇವಾನಂದ್, ಶ್ರೀ ವರ್ತೆಶ್, ಶ್ರೀ ಆರ್. ಚಾಬುಸಾಬ್ ಶ್ರೀ ಬಿ ಜಿ ಚಂದ್ರಮೌಳಿ, ಶ್ರೀಬಂಡಿ ರಾಮಚಂದ್ರ ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...