Monday, August 24, 2026
Monday, August 24, 2026

ಮೆಕ್ಕೆಜೋಳ ಬೆಳೆಗೆ ವಿಮೆ ಪರಿಹಾರ ಪಡೆಯದ ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ

Date:

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿಯಲ್ಲಿ ಮೆಕ್ಕೆಜೋಳ ಬೆಳೆಗೆ ವಿಮೆ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.

ಬೆಳೆ ಸಮೀಕ್ಷೆಯ ಫೋಟೋಗಳು ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ.

ಇಂತಹ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿಯನ್ನು ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಯಾವ ರೈತರಿಗೆ ಇನ್ನೂ ವಿಮೆ ಪರಿಹಾರ ಬಂದಿಲ್ಲವೋ, ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿಯನ್ನು ಪರಿಶೀಲಿಸಬೇಕು.

ತಮ್ಮ ಹೆಸರು ತಿರಸ್ಕೃತ ಪಟ್ಟಿಯಲ್ಲಿದ್ದರೆ, 2024ರ ಮುಂಗಾರು ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಯೋಜನೆಯಲ್ಲಿ ಪ್ರಯೋಜನೆ ಪಡೆದಿರುವ ಬಗ್ಗೆ ರಸೀದಿ, ಪಶು ಆಹಾರ ಘಟಕಕ್ಕೆ ನೀಡಿದ ಬಗ್ಗೆ ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳನ್ನು ಮಾರಾಟ ಮಾಡಿದ ರಸೀದಿಗಳೊಂದಿಗೆ ಲಿಖಿತ ಮನವಿಯನ್ನು ಸಲ್ಲಿಸಬಹುದು.

ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನಾಂಕವಾಗಿದೆ. ಸಲ್ಲಿಕೆಯಾದ ಮನವಿಗಳನ್ನು ತಾಲೂಕು ಮಟ್ಟದ ತಹಶೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...