Monday, August 24, 2026
Monday, August 24, 2026

DC Shivamogga ಗಣತಿ ಸಂದರ್ಭದಲ್ಲಿ ಕುಟುಂಬದ ಮಾಹಿತಿ,ಜಾತಿ,ಉಪಜಾತಿ,ಹೆಸರುಗಳ ಗೊಂದಲ ಆಗದಂತೆ ಜಾಗ್ರತೆಯಿಂದ ಕಾರ್ಯ ನಿರ್ವಹಿಸಿ- ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು.
ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
DC Shivamogga ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿಯಿಂದ ವಂಚಿತವಾಗಬಾರದು ಎಂದು ತಿಳಿಸಿದ ಅವರು ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದ ಅವರು ತಹಶೀಲ್ದಾರ್‌ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...