Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ “ವೃತ್ತಿಪರ ಪತ್ರಕರ್ತರ ಸವಾಲುಗಳು” ಎನ್ನುವ ವಿಷಯದ ಕುರಿತು ಶರತ್ ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು.
ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವುದು ತುಂಬಾ ಸವಾಲು ಆಗಿರುತ್ತದೆ. ಪತ್ರಕರ್ತರಿಗೆ ಸಮಯ ನಿರ್ವಹಣೆ ಮಾಡುವುದು ತಿಳಿದಿರಬೇಕು. ಸೂಕ್ಷ್ಮ ವಿಚಾರಗಳ ಕುರಿತು ವರದಿ ಮಾಡುವಾಗ ಜವಾಬ್ದಾರಿಯಿಂದ ಮಾಡಬೇಕು ಮತ್ತು ಗಂಭೀರ ವಿಚಾರದ ಕುರಿತು ಜಾಗೃತರಾಗಿರಬೇಕು ಎಂದು ತಿಳಿಸಿದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ತುಂಬಾ ಅವಕಾಶಗಳಿವೆ ಮತ್ತು ಮುದ್ರಣ ಮಾಧ್ಯಮಕ್ಕೆ ಹೋಗುವವರಿಗೆ ಬರವಣಿಗೆ ಕೌಶಲ್ಯ ತುಂಬಾ ಮುಖ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.
Kuvempu University ವಿಭಾಗದ ಹಳೆಯ ವಿದ್ಯಾರ್ಥಿ ಆಗಿದ್ದ ಶರತ್ ಕುಮಾರ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024 ನೇ ಸಾಲಿನ ಬಿ ಜಿ ತಿಮ್ಮಪ್ಪಯ್ಯ ಪ್ರಶಸ್ತಿಗೆ ಭಾಜನರಾದ ಕಾರಣ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥರಾದ ಡಾ. ವರ್ಗೀಸ್ ಪಿ.ಎ ವಹಿಸಿದ್ದರು.ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್,ಡಾ.ಸತ್ಯ ಪ್ರಕಾಶ್ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮುಬೀನಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. ಭಾರ್ಗವಿ ಜಿ.ಆರ್ ಪ್ರಾರ್ಥಿಸಿ, ತಾರಾ ವಂದಿಸಿದರು.
Kuvempu University ಮುದ್ರಣ ಮಾಧ್ಯಮದಲ್ಲಿ ಬರವಣಿಗೆ ಕೌಶಲ, ಮುಖ್ಯ. ವರದಿಗಾರಿಕೆ ತುಂಬಾ ಜವಾಬ್ದಾರಿಯುಳ್ಳದ್ದು- ಶರತ್ ಕುಮಾರ್ ಉದಯವಾಣಿ
Date:
