Thursday, May 14, 2026
Thursday, May 14, 2026

Sri Adi Chunchanagiri ಶ್ರೀಆದಿಚುಂಚನಗಿರಿ ಸ್ವತಂತ್ರ ಪಪೂ ಕಾಲೇಜಿಗೆ ಶೇ 99.71 ಫಲಿತಾಂಶ. ಸಂಗಡ 5 ವಿದ್ಯಾರ್ಥಿಗಳ ಉನ್ನತ ಶ್ರೇಣಿ ಸಾಧನೆ.

Date:

Sri Adi Chunchanagiri ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾದ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ: ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು- 351, ತೇರ್ಗಡೆಯಾದ ವಿದ್ಯಾರ್ಥಿಗಳು- 350, 209 ಡಿಸ್ಟಿಂಕ್ಷನ್,137 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 05 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದು 99.71% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿರುತ್ತಾರೆ.
ಈ ಸಾಧನೆಯನ್ನು ಮೆಚ್ಚಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಶುಭ ಹಾರೈಸಿರುತ್ತಾರೆ. ಸಲ್ಲಿಸಿರುತ್ತಾರೆ.
ಬಾಕ್ಸ್:
Sri Adi Chunchanagiri ಕಾಲೇಜಿಗೆ 5 ರ‍್ಯಾಂಕ್ ಉತ್ತಮ ಸಾಧನೆ: ಲಕ್ಷ್ಮಿ ಹೆಚ್.ಕೆ. 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 6ನೇ ರ‍್ಯಾಂಕ್ , ಜಿಯಾ ಶೇಟ್ 600 ಕ್ಕೆ 592 ಅಂಕ ಪಡೆದು 7ನೇ ರ‍್ಯಾಂಕ್ , ಫರಿಯಲ್ ಫಾತಿಮ 600 ಕ್ಕೆ 591 ಅಂಕ ಪಡೆದು 8ನೇ ರ‍್ಯಾಂಕ್ ,ತೇಜಶ್ರೀ ಎಸ್. 600 ಕ್ಕೆ 590 ಅಂಕ ಪಡೆದು 9ನೇ ರ‍್ಯಾಂಕ್ ಹಾಗೂ ಅನ್ನಪೂರ್ಣ ಜಿ.ಎಸ್. 600ಕ್ಕೆ 589 ಅಂಕ ಪಡೆದು 10ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...