Friday, April 10, 2026
Friday, April 10, 2026

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

Date:

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ 11 ಮತ್ತು 12ರಂದು ಆಯೋಜಿಸಿರುವ “ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0” ಕ್ರೀಡಾಕೂಟದ ಅಂಗವಾಗಿ, ನಗರದ ಆದಿ ಗ್ರ್ಯಾಂಡ್ ಹಾಲ್, ಹೋಟೆಲ್ ಶುಭಂನಲ್ಲಿ ಟ್ರೋಫಿ ಮತ್ತು ಟಿ-ಶರ್ಟ್ ಬಿಡುಗಡೆ ಸಮಾರಂಭವನ್ನು ಅದ್ದೂರಿಯಾಗಿ ಯಾಗಿ ನೆರವೇರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಚ್ಚರಿಕೆ ಪತ್ರಿಕೆಯ ಸಂಪಾದಕರಾದ ಸೂರ್ಯನಾರಾಯಣ ಅವರು ಭಾಗವಹಿಸಿ ಟ್ರೋಫಿ ಹಾಗೂ ಟಿ-ಶರ್ಟ್ ಅನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂತಹ ಕ್ರೀಡಾಕೂಟಗಳು ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದರ ಜೊತೆಗೆ ಒಗ್ಗಟ್ಟು ಮತ್ತು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.
ವಲಯ ಅಧ್ಯಕ್ಷರಾದ ಜೆ ಸಿ ಮಧುಸೂಧನ್ ನಾವುಡ , ಹಿರಿಯ ಜೆ ಸಿ ಗಳಾದ ವಸಂತಕುಮಾರ್ ಹಾಗೂ ವಿಲಿಯಂ ಡಿಸೋಜ ಅವರು ಕ್ರೀಡಾಕೂಟದ ಯಶಸ್ಸಿಗೆ ಶುಭ ಹಾರೈಸಿದರು.
ಸಂಸ್ಥೆಯ ಅಧ್ಯಕ್ಷರಾದ ಜೆಸಿ ಚಂದ್ರಹಾಸ್ ಹಾಗೂ ಉಪಾಧ್ಯಕ್ಷರಾದ ಜೆಸಿ ಸುದರ್ಶನ್ ತಾಯಿಮನೆ ಅವರು, ಬಾಕ್ಸ್ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.
JCI Shimoga ಪದಾಧಿಕಾರಿಗಳಾದ ಶ್ರೀನಾಗ್, ಜಗದೀಶ್, ಮೋಹನ್ ಕಲ್ಪತರು, ಪರಮೇಶ್ವರ್, ಉದಯ ಕದಂಬ, ಆದರ್ಶ್, Jc ಸ್ಮಿತಾ ಮೋಹನ್, ಸುಗುಣಾ ಸತೀಶ್, ಪೂರ್ಣಿಮಾ ಸುನಿಲ್ ಹಾಗೂ ಮಮತಾ ರಘು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕ್ಲಬ್‌ನ ಎಲ್ಲಾ ಪದಾಧಿಕಾರಿಗಳು, ವಲಯ 24ರ ಆಡಳಿತ ಮಂಡಳಿ ಸದಸ್ಯರು, JAC, JCOM, ಸಹ ಪ್ರಾಯೋಜಕರು, ಶಿವಮೊಗ್ಗದ ಹಿರಿಯ ಹಾಗೂ ಕಿರಿಯ ಜೇಸಿ ಸದಸ್ಯರು, ಕ್ರಿಕೆಟ್ ತಂಡಗಳ ಮಾಲೀಕರು ಮತ್ತು ಆಟಗಾರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ ಮೆಟ್ಟಿಲೇರುವ ಸಮಯ....

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...

Shivamogga News ಕಾ.ಎಂ.ಲಿಂಗಪ್ಪನವರು, ಅಸಹಾಯಕರು ಮತ್ತು ದುರ್ಬಲ ಜನತೆಯ ಪರ ಧ್ವನಿಯಾಗಿದ್ದರು- ಡಿ.ರವಿಕುಮಾರ್.

Shivamogga News ನಾಡು ಕಂಡಂತಹ ಹಿರಿಯ ದಣಿವರಿಯದ ಅಕ್ಷರದ ದನಿ ಕಾಮ್ರೇಡ್...