Saturday, April 11, 2026
Saturday, April 11, 2026

ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು ತಾಯಂದಿರ ಕರ್ತವ್ಯ- ಗಂಗಾಬಾಯಿ

Date:

ತಾಯಿ ಮತ್ತು ಮಗುವಿನ ಆರೋಗ್ಯ ಬಹಳ ಮುಖ್ಯ ಹಾಗಾಗಿ ಅವರಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡಿ ಪೌಷ್ಟಿಕತೆಯ ಆಹಾರಗಳನ್ನು ನೀಡುತ್ತಾ, ಅವರಿಗೆ ಶಕ್ತಿ ತುಂಬುವುದು ಎಲ್ಲ ತಾಯಂದಿರ ಕರ್ತವ್ಯ ಎಂದು ಶ್ರೀಮತಿ ಗಂಗಾಬಾಯಿ ಶಿಶು ಅಭಿವೃದ್ಧಿಯ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ ಅವರು ತಿಳಿಸಿದರು.
ಅವರು ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ. ಇವರ ಸಹಯೋಗದಲ್ಲಿ ಪೋಷಣ್ ಪಕ್ವಾಡ 2026 ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಾಯಿ ಮತ್ತು ಮಗುವಿನ ರಕ್ಷಣೆಗೆ ನಾವೆಲ್ಲರೂ ಪೌಷ್ಟಿಕಾಂಶ ಇರುವ ಒಳ್ಳೆಯ ಆಹಾರವನ್ನು ಸರಿಯಾದ ರೀತಿಯಲ್ಲಿ ನೀಡುವುದರೊಂದಿಗೆ ತಾಯಿ ಆರೋಗ್ಯ ಹಾಗೂ ಮಗುವಿನ ಬೆಳವಣಿಗೆ ಕುರಿತಂತೆ ನಾವೆಲ್ಲರೂ ಗಮನಹರಿಸಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಅಕ್ಷಯ ಅವರು ಮಾತನಾಡಿ ಇಲಾಖೆಯ ವತಿಯಿಂದ ಮಗುವಿನ ಬೆಳವಣಿಗೆಗೆ ಹಾಗೂ ತಾಯಿ ಆರೋಗ್ಯದ ರಕ್ಷಣೆಗಾಗಿ ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಕುರಿತಂತೆ ವಿವರಣೆ ನೀಡಿದರು.

ಈ ಪೋಷಣ ಪಕ್ವಾಡ ಕಾರ್ಯಕ್ರಮ ಏಪ್ರಿಲ್ 9 ರಿಂದ ಏಪ್ರಿಲ್ 23ರ ವರೆಗೆ ನಡೆಯಲಿದೆ .
ಈ ಕಾರ್ಯಕ್ರಮದಲ್ಲಿ ಶ್ರೀ ಸಿ ವಿ ಲಕ್ಷ್ಮಿಕಾಂತ ಕ್ಷೇತ್ರ ಪ್ರಚಾರ ಸಹಾಯಕರು ,ಕೇಂದ್ರ ಸಂವಹನ ಇಲಾಖೆ, ಹಾಗೂ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿಯರಾದ ಶ್ರೀಮತಿ ರೇಖಾ,ಶ್ರೀಮತಿ ಆಶಾ, ಶ್ರೀಮತಿ ಪ್ರತಿಮಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕ ಮಹಿಳೆಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...