Sunday, May 31, 2026
Sunday, May 31, 2026

ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು ತಾಯಂದಿರ ಕರ್ತವ್ಯ- ಗಂಗಾಬಾಯಿ

Date:

ತಾಯಿ ಮತ್ತು ಮಗುವಿನ ಆರೋಗ್ಯ ಬಹಳ ಮುಖ್ಯ ಹಾಗಾಗಿ ಅವರಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡಿ ಪೌಷ್ಟಿಕತೆಯ ಆಹಾರಗಳನ್ನು ನೀಡುತ್ತಾ, ಅವರಿಗೆ ಶಕ್ತಿ ತುಂಬುವುದು ಎಲ್ಲ ತಾಯಂದಿರ ಕರ್ತವ್ಯ ಎಂದು ಶ್ರೀಮತಿ ಗಂಗಾಬಾಯಿ ಶಿಶು ಅಭಿವೃದ್ಧಿಯ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ ಅವರು ತಿಳಿಸಿದರು.
ಅವರು ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ. ಇವರ ಸಹಯೋಗದಲ್ಲಿ ಪೋಷಣ್ ಪಕ್ವಾಡ 2026 ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಾಯಿ ಮತ್ತು ಮಗುವಿನ ರಕ್ಷಣೆಗೆ ನಾವೆಲ್ಲರೂ ಪೌಷ್ಟಿಕಾಂಶ ಇರುವ ಒಳ್ಳೆಯ ಆಹಾರವನ್ನು ಸರಿಯಾದ ರೀತಿಯಲ್ಲಿ ನೀಡುವುದರೊಂದಿಗೆ ತಾಯಿ ಆರೋಗ್ಯ ಹಾಗೂ ಮಗುವಿನ ಬೆಳವಣಿಗೆ ಕುರಿತಂತೆ ನಾವೆಲ್ಲರೂ ಗಮನಹರಿಸಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಅಕ್ಷಯ ಅವರು ಮಾತನಾಡಿ ಇಲಾಖೆಯ ವತಿಯಿಂದ ಮಗುವಿನ ಬೆಳವಣಿಗೆಗೆ ಹಾಗೂ ತಾಯಿ ಆರೋಗ್ಯದ ರಕ್ಷಣೆಗಾಗಿ ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಕುರಿತಂತೆ ವಿವರಣೆ ನೀಡಿದರು.

ಈ ಪೋಷಣ ಪಕ್ವಾಡ ಕಾರ್ಯಕ್ರಮ ಏಪ್ರಿಲ್ 9 ರಿಂದ ಏಪ್ರಿಲ್ 23ರ ವರೆಗೆ ನಡೆಯಲಿದೆ .
ಈ ಕಾರ್ಯಕ್ರಮದಲ್ಲಿ ಶ್ರೀ ಸಿ ವಿ ಲಕ್ಷ್ಮಿಕಾಂತ ಕ್ಷೇತ್ರ ಪ್ರಚಾರ ಸಹಾಯಕರು ,ಕೇಂದ್ರ ಸಂವಹನ ಇಲಾಖೆ, ಹಾಗೂ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿಯರಾದ ಶ್ರೀಮತಿ ರೇಖಾ,ಶ್ರೀಮತಿ ಆಶಾ, ಶ್ರೀಮತಿ ಪ್ರತಿಮಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕ ಮಹಿಳೆಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...