Sunday, August 2, 2026
Sunday, August 2, 2026

ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು ತಾಯಂದಿರ ಕರ್ತವ್ಯ- ಗಂಗಾಬಾಯಿ

Date:

ತಾಯಿ ಮತ್ತು ಮಗುವಿನ ಆರೋಗ್ಯ ಬಹಳ ಮುಖ್ಯ ಹಾಗಾಗಿ ಅವರಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡಿ ಪೌಷ್ಟಿಕತೆಯ ಆಹಾರಗಳನ್ನು ನೀಡುತ್ತಾ, ಅವರಿಗೆ ಶಕ್ತಿ ತುಂಬುವುದು ಎಲ್ಲ ತಾಯಂದಿರ ಕರ್ತವ್ಯ ಎಂದು ಶ್ರೀಮತಿ ಗಂಗಾಬಾಯಿ ಶಿಶು ಅಭಿವೃದ್ಧಿಯ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ ಅವರು ತಿಳಿಸಿದರು.
ಅವರು ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಶಿವಮೊಗ್ಗ. ಇವರ ಸಹಯೋಗದಲ್ಲಿ ಪೋಷಣ್ ಪಕ್ವಾಡ 2026 ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಾಯಿ ಮತ್ತು ಮಗುವಿನ ರಕ್ಷಣೆಗೆ ನಾವೆಲ್ಲರೂ ಪೌಷ್ಟಿಕಾಂಶ ಇರುವ ಒಳ್ಳೆಯ ಆಹಾರವನ್ನು ಸರಿಯಾದ ರೀತಿಯಲ್ಲಿ ನೀಡುವುದರೊಂದಿಗೆ ತಾಯಿ ಆರೋಗ್ಯ ಹಾಗೂ ಮಗುವಿನ ಬೆಳವಣಿಗೆ ಕುರಿತಂತೆ ನಾವೆಲ್ಲರೂ ಗಮನಹರಿಸಬೇಕಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಅಕ್ಷಯ ಅವರು ಮಾತನಾಡಿ ಇಲಾಖೆಯ ವತಿಯಿಂದ ಮಗುವಿನ ಬೆಳವಣಿಗೆಗೆ ಹಾಗೂ ತಾಯಿ ಆರೋಗ್ಯದ ರಕ್ಷಣೆಗಾಗಿ ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಕುರಿತಂತೆ ವಿವರಣೆ ನೀಡಿದರು.

ಈ ಪೋಷಣ ಪಕ್ವಾಡ ಕಾರ್ಯಕ್ರಮ ಏಪ್ರಿಲ್ 9 ರಿಂದ ಏಪ್ರಿಲ್ 23ರ ವರೆಗೆ ನಡೆಯಲಿದೆ .
ಈ ಕಾರ್ಯಕ್ರಮದಲ್ಲಿ ಶ್ರೀ ಸಿ ವಿ ಲಕ್ಷ್ಮಿಕಾಂತ ಕ್ಷೇತ್ರ ಪ್ರಚಾರ ಸಹಾಯಕರು ,ಕೇಂದ್ರ ಸಂವಹನ ಇಲಾಖೆ, ಹಾಗೂ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿಯರಾದ ಶ್ರೀಮತಿ ರೇಖಾ,ಶ್ರೀಮತಿ ಆಶಾ, ಶ್ರೀಮತಿ ಪ್ರತಿಮಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕ ಮಹಿಳೆಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...