B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ ನಡೆದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. B.Y. Raghavendra ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಮೆಗ್ಗಾನ್ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಲಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅಪಘಾತದ ಸಮಯದಲ್ಲಿ ತಕ್ಷಣವೇ ಸ್ಪಂದಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ ಸ್ಥಳೀಯ ಸಾರ್ವಜನಿಕರ ಕಾರ್ಯ ಶ್ಲಾಘನೀಯ.ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ
Date:
