ಏ. 12ರಂದು ಬೀದರ್ ನ 40ನೇ ರಾಜ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಕಾರ್ಯಕಾರಿ, ನಂತರ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ವಿಷಯವನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ್ ಘೋಷಿಸಿದ್ದಾರೆ.
ರವಿಕುಮಾರ್ರವರು ಈ ಹಿಂದೆ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರಲ್ಲದೇ ಇತ್ತೀಚೆಗೆ ಸಂಘ ರಾಜ್ಯ ಚುನಾವಣಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.
ನೂತನವಾಗಿ ರಾಜ್ಯಸಮಿತಿ ಸದಸ್ಯಯರಾಗಿ ನೇಮಕಗೊಂಡ ಎನ್. ರವಿಕುಮಾರ್ರವರನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ನಿರ್ದೇಶಕ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಎಸ್. ಹಾಲಸ್ವಾಮಿ, ಕಾರ್ಯಕಾರಿ ಪದಾಽಕಾರಿಗಳು, ಸಮಿತಿ ಸದಸ್ಯರು, ಅಭಿನಂದಿಸಿದ್ದಾರೆ. ಏಪ್ರಿಲ್ 12ರಂದು ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ,ಉಪಾಧ್ಯಕ್ಷರಾದ ಹೆಚ್ ಬಿ ಮದನಗೌಡ, ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ , ಪತ್ರಕರ್ತ ಅಪ್ಪರಾವ್ ಸೌದಿ ಅವರು ನೂತನ ನಿರ್ದೇಶಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರನ್ನು ಸನ್ಮಾನಿಸಿದರು.
