Sunday, August 2, 2026
Sunday, August 2, 2026

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾಗಿ ಟೆಲೆಕ್ಸ್ ರವಿಕುಮಾರ್ ಆಯ್ಕೆ

Date:

ಏ. 12ರಂದು ಬೀದರ್ ನ 40ನೇ ರಾಜ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಕಾರ್ಯಕಾರಿ, ನಂತರ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ವಿಷಯವನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ್ ಘೋಷಿಸಿದ್ದಾರೆ.
ರವಿಕುಮಾರ್‌ರವರು ಈ ಹಿಂದೆ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರಲ್ಲದೇ ಇತ್ತೀಚೆಗೆ ಸಂಘ ರಾಜ್ಯ ಚುನಾವಣಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.

ನೂತನವಾಗಿ ರಾಜ್ಯಸಮಿತಿ ಸದಸ್ಯಯರಾಗಿ ನೇಮಕಗೊಂಡ ಎನ್. ರವಿಕುಮಾರ್‌ರವರನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ನಿರ್ದೇಶಕ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಎಸ್. ಹಾಲಸ್ವಾಮಿ, ಕಾರ್ಯಕಾರಿ ಪದಾಽಕಾರಿಗಳು, ಸಮಿತಿ ಸದಸ್ಯರು, ಅಭಿನಂದಿಸಿದ್ದಾರೆ. ಏಪ್ರಿಲ್ 12ರಂದು ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ,ಉಪಾಧ್ಯಕ್ಷರಾದ ಹೆಚ್ ಬಿ ಮದನಗೌಡ, ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ , ಪತ್ರಕರ್ತ ಅಪ್ಪರಾವ್ ಸೌದಿ ಅವರು ನೂತನ ನಿರ್ದೇಶಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರನ್ನು ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...