D.S.Arun ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೈಗಾರಿಕಾ ಪ್ರದೇಶಕ್ಕೆ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೈಗಾರಿಕಾ ಪ್ರದೇಶದಿಂದ ಭಾರಿ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಸೇರುವಾಗ ಸರ್ವಿಸ್ ರಸ್ತೆ ಬಹಳ ಕಿರಿದಿರುವುದು ಆಗಷ್ಟೇ ಶಾಸಕರ ಗಮನಕ್ಕೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಎಸ್.ಅರುಣ್. ಸೂಚಿಸಿದರು. ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದರು..
D.S.Arun ಈ ಸಂದರ್ಭದಲ್ಲಿ ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್, ಪ್ರವೀಣ್, ಸೌರಬ್, ಸಂಜಯ್ ಪಾಟೀಲ್ ಹಾಗೂ ಅಧಿಕಾರಿಗಳಾದ ವಸಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.
