Monday, June 1, 2026
Monday, June 1, 2026

D S Arun ಶಿವಮೊಗ್ಗ ಹಾಸನ& ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ವಿವಿಧ ವಯೋಮಾನ ವಿಭಾಗಗಳಲ್ಲಿ ಕೆಎಸ್ಸಿಎ ವಲಯ ಆಯ್ಕೆ ಪ್ರಕ್ರಿಯೆ- ಡಿ.ಎಸ್.ಅರುಣ್

Date:

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ.), ಶಿವಮೊಗ್ಗ ವಲಯದ ವತಿಯಿಂದ 2026–27ನೇ ಸಾಲಿನ ಅಕಾಡೆಮಿ ಆಯ್ಕೆ ಪ್ರಕ್ರಿಯೆಗಳು (ಪುರುಷರು ಹಾಗೂ ಮಹಿಳೆಯರಿಗೆ) ಆಯೋಜಿಸಲಾಗುತ್ತಿದೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತದೆ.
ಈ ಆಯ್ಕೆ ಪ್ರಕ್ರಿಯೆಗಳು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿವಿಧ ವಯೋಮಾನದ ವಿಭಾಗಗಳಲ್ಲಿ ನಡೆಯಲಿದ್ದು, ದಿನಾಂಕ 20 ಮಾರ್ಚ್ 2026 ರಂದು ಪ್ರಕಟಿಸಿದ ಅಧಿಕೃತ ವೇಳಾಪಟ್ಟಿಯಂತೆ ಆಯೋಜಿಸಲಾಗುತ್ತಿದೆ.
ಈ ಪ್ರಕ್ರಿಯೆಗಳ ಮೂಲಕ ಅಂಡರ್-14, ಅಂಡರ್-16, ಅಂಡರ್-19 (ಬಾಲಕರು) ಹಾಗೂ ಅಂಡರ್-15, ಅಂಡರ್-19 (ಮಹಿಳೆಯರು) ವಿಭಾಗಗಳಲ್ಲಿ ಪ್ರತಿಭಾವಂತ ಆಟಗಾರರನ್ನು ಗುರುತಿಸಿ, ಮುಂದಿನ ಹಂತದಲ್ಲಿ ಕೆ.ಎಸ್.ಸಿ.ಎ. ಅಕಾಡೆಮಿ ತರಬೇತಿ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ, ಕೆ.ಎಸ್.ಸಿ.ಎ. ಶಿವಮೊಗ್ಗ ವಲಯದ ಕನ್ವೀನರ್ ಶ್ರೀ ಡಿ. ಎಸ್. ಅರುಣ್ ಅವರು ಸ್ಥಳದಲ್ಲಿ ಹಾಜರಿದ್ದು, ಆಯ್ಕೆ ಪ್ರಕ್ರಿಯೆಯು ನ್ಯಾಯಸಮ್ಮತವಾಗಿ, ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಮೇಲ್ವಿಚಾರಣೆ ನಡೆಸುತ್ತಿದಾರೆ.
ಈ ಮಹತ್ವದ ಕ್ರೀಡಾ ಚಟುವಟಿಕೆಯನ್ನು ನಿಮ್ಮ ಪ್ರತಿಷ್ಠಿತ ಮಾಧ್ಯಮಗಳ ಮೂಲಕ ಪ್ರಸಾರ / ಪ್ರಕಟಣೆ ಮಾಡುವಂತೆ ವಿನಂತಿಸುತ್ತೇವೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಕೆ.ಎಸ್.ಸಿ.ಎ. ಶಿವಮೊಗ್ಗ ವಲಯ: ಕೆ.ಎಸ್.ಸಿ.ಎ. ನವಲೆ ಕ್ರೀಡಾಂಗಣ, ಶಿವಮೊಗ್ಗ
ಇಮೇಲ್: shivamogga@ksca.co.in
ನಿಮ್ಮ ಸಹಕಾರಕ್ಕೆ ಧನ್ಯವಾದಗಳು.
ವಂದನೆಗಳೊಂದಿಗೆ,
ಡಿ. ಎಸ್. ಅರುಣ್
ವಲಯ ಕನ್ವೀನರ್
KSCA ಶಿವಮೊಗ್ಗ ವಲಯ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ದೇಗುಲದ ವಾಸ್ತು- ವಿನ್ಯಾಸ ಮತ್ತು ಮನುಷ್ಯ ಶರೀರ, ಒಂದು ವಿವೇಚನೆ ...

Klive Special Article ದೇವಸ್ಥಾನದ ವಾಸ್ತುಶಿಲ್ಪ ಮತ್ತು ಮಾನವ ಶರೀರ ರಚನೆಯ...

B.Y. Raghavendra ದೇಶದ ತಳಮಟ್ಟದ ಸಾಧಕರ ಯಶಸ್ಸಿನ ಕತೆ ತಿಳಿಸುವ ಪ್ರಧಾನಿ ಮೋದಿ ಅವರ “ಮನ್ ಕಿ ಬಾತ್”- ಬಿ.ವೈ.ರಾಘವೇಂದ್ರ

B.Y. Raghavendra ಶಿಕಾರಿಪುರ ತಾಲ್ಲೂಕಿನ ಅಂಬಾರಗೊಪ್ಪದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರೊಂದಿಗೆ...

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದುಸಂಸದ ಬಿ.ವೈ.ರಾಘವೇಂದ್ರ ಅವರು...

Klive Special Article ಭಕ್ತಿಭಾವಗಳಿಂದ ಜಗದ್ಗುರುಗಳನ್ನ ಬೀಳ್ಕೊಟ್ಟ ನೇಪಾಳ ಭಕ್ತವೃಂದ

ವಿಶೇಷ ವರದಿ: ಪ್ರಭಾಕರ ಕಾರಂತ. Klive Special Article ಜಗದ್ಗುರು ಶ್ರೀ...