Dr. B.R. Ambedkar ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊಳಲೂರು ಇಲ್ಲಿ 135ನೇ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಗೌರವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಶ್ರೀಮತಿ ದೀಪ ಜಿ, ಟ್ರೈನರ್ ಕತ್ತುಮನ್ನಿಸಾ, ಹಾಗೂ ಟೈಲರಿಂಗ್ ತರಬೇತಿಯಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭಿಸಲಾಯಿತು. ನಂತರ ಮಾತನಾಡಿದ ಅತಿಥಿಗಳು ಮತ್ತು ಉಪನ್ಯಾಸಕರು ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಶೈಲಿ, ಸಾಧನೆಗಳು ಹಾಗೂ ಸಮಾಜಕ್ಕೆ ನೀಡಿದ ಮಹತ್ತರ ಕೊಡುಗೆಗಳ ಕುರಿತು ವಿವರವಾಗಿ ಬೆಳಕು ಚೆಲ್ಲಿದರು.
ಅಂಬೇಡ್ಕರ್ ಅವರು ಸರಳ ಜೀವನ ನಡೆಸಿದ ಮಹಾನ್ ನಾಯಕರು. ಅವರು ಶಿಕ್ಷಣವನ್ನು ಶಕ್ತಿ ಎಂದು ನಂಬಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅನೇಕ ಹೋರಾಟಗಳನ್ನು ನಡೆಸಿದರು. ಭಾರತೀಯ ಸಂವಿಧಾನದ ಶಿಲ್ಪಿಯಾಗಿರುವ ಅವರು ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಸಮಾಜಕ್ಕೆ ನೀಡಿದ್ದಾರೆ.
Dr. B.R. Ambedkar ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತರಬೇತಿಗಾರರಿಗೆ ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರಣೆ ನೀಡಲಾಯಿತು. ವಿಶೇಷವಾಗಿ ಶಿಕ್ಷಣದ ಮಹತ್ವ, ಸ್ವಾಭಿಮಾನ ಮತ್ತು ಸ್ವಾವಲಂಬನೆ ಕುರಿತು ತಿಳಿಸಿ, ಜೀವನದಲ್ಲಿ ಮುಂದುವರಿಯಲು ಮಾರ್ಗದರ್ಶನ ನೀಡಲಾಯಿತು.
ಈ ಕಾರ್ಯಕ್ರಮವು ಎಲ್ಲರಿಗೂ ಪ್ರೇರಣಾದಾಯಕವಾಗಿದ್ದು, ಅಂಬೇಡ್ಕರ್ ಅವರ ಚಿಂತನೆಗಳನ್ನು ಮತ್ತೆ ನೆನಪಿಸುವ ಒಂದು ಅರ್ಥಪೂರ್ಣ ಆಚರಣೆಯಾಗಿ నిలಿಯಿತು.
Dr. B.R. Ambedkar ಡಾ.ಅಂಬೇಡ್ಕರ್ ಸರಳ ಜೀವನ ನಡೆಸಿದ ಮಹನ್ ನಾಯಕರು- ಸುರೇಶ್ ವೈ ಹಳ್ಳಿ.
Date:
