Thursday, September 17, 2026
Thursday, September 17, 2026

ಡಾ.ಸಮೀಕ್ಷಾ ರೆಡ್ಡಿ ಅವರ ಬಲಿ ಪಡೆದ ನೀರಾನೆ ” ಹಂಸಿಣಿ”, ಅನಾರೋಗ್ಯದಿಂದ ಸಾವು

Date:

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ 12 ವರ್ಷದ ಹೆಣ್ಣು ಹಿಪ್ಪೊಪೊಟಾಮಸ್ (ನೀರಾನೆ) ‘ಹಂಸಿಣಿ’ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದೆ.
ಗರ್ಭಿಣಿಯಾಗಿದ್ದ ಹಂಸಿಣಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಎಂಟು ತಿಂಗಳ ಗರ್ಭಾವಸ್ಥೆಯ ಅವಧಿ ಮಾರ್ಚ್ ಮಧ್ಯಭಾಗದಲ್ಲೇ ಪೂರ್ಣಗೊಂಡಿದ್ದರೂ, ಪ್ರಸವದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ನಡುವೆ ಪ್ರಾಣಿಯು ಆಹಾರ ಸೇವನೆ ಕಡಿಮೆ ಮಾಡಿ, ಅತ್ಯಂತ ನಿಶ್ಯಕ್ತಿಯಿಂದ ಕೂಡಿತ್ತು.
ಚಿಕಿತ್ಸೆ ಮತ್ತು ಸೋಂಕು: ಪ್ರಾಣಿಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಏಪ್ರಿಲ್ 10 ರಂದು ಮೈಸೂರಿನ ಕರ್ನಾಟಕ ಮೃಗಾಲಯ ಪ್ರಾಧಿಕಾರದ ವನ್ಯಜೀವಿ ಪಶುವೈದ್ಯರ ತಂಡ ಆಗಮಿಸಿ ತಪಾಸಣೆ ನಡೆಸಿತ್ತು. ರಕ್ತ ಮತ್ತು ದ್ರವಗಳ ಪರೀಕ್ಷೆಯ ವರದಿಯಲ್ಲಿ ಗರ್ಭಾಶಯದಲ್ಲಿ ಗಂಭೀರವಾದ ಸೋಂಕು ಇರುವುದು ಪತ್ತೆಯಾಗಿತ್ತು. ಗರ್ಭಾಶಯದ ಒಳಗೇ ಭ್ರೂಣ ಮರಣ ಹೊಂದಿದ್ದು ಇದು ಸೋಂಕಿಗೆ ಕಾರಣವಾಗಿರಬಹುದು ಎಂದು ಪಶುವೈದ್ಯರು ಅಭಿಪ್ರಾಯಪಟ್ಟಿದ್ದರು.
ಕರ್ನಾಟಕ ಮೃಗಾಲಯ ಪ್ರಾಧಿಕಾರ, ಮೈಸೂರು ಪಶುವೈದ್ಯರು ಹಾಗೂ ಪಶುವೈದ್ಯಕೀಯ ಪ್ರಸೂತಿ ತಜ್ಞರ ಮಾರ್ಗದರ್ಶನದಲ್ಲಿ ಹಂಸಿಣಿಗೆ ಸತತವಾಗಿ ಚಿಕಿತ್ಸೆ ಮತ್ತು ಆರೈಕೆ ನೀಡಲಾಗುತ್ತಿತ್ತು. ಆದರೆ, ಸೋಂಕು ಪ್ರಾಣಿಯ ಪ್ರಮುಖ ಅಂಗಾಂಗಗಳ ಮೇಲೆ ತೀವ್ರ ಪರಿಣಾಮ ಬೀರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 14ರ ಮಧ್ಯಾಹ್ನ 3.08 ಗಂಟೆಗೆ ಹಂಸಿಣಿ ಕೊನೆಯುಸಿರೆಳೆದಿದೆ ಎಂದು ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...