Friday, August 7, 2026
Friday, August 7, 2026

ಭಾರತದೇಶ ಕಂಡ ಮಹಾನ್ ವ್ಯಕ್ತಿ ,ಡಾ.ಅಂಬೇಡ್ಕರ್- ಶಕುಂತಲಾ ಚಂದ್ರಶೇಖರ್

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಮಾನತೆಯ ಹರಿಕಾರ. ದೇಶದ ಮೊದಲ ಕಾನೂನಿನ ಸಚಿವರು, ಭಾರತ ದೇಶ ಕಂಡ ಮಹಾನ್ ವ್ಯಕ್ತಿ. ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಪ್ರಧಾನ ಆಯುಕ್ತಾರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ ನುಡಿದರು ಅವರು ಸ್ಕೌಟ್ ಭವನದಲ್ಲಿ ಆಯೋಜಿಸಲಾಗಿದ್ದ ಡಾ. ಬಿ ಆರ್ ಅಂಬೇಡ್ಕರ್ ರವರ 135 ನೇ ಜನ್ಮದಿನ ಜಯಂತಿ ಸಭೆಯಲ್ಲಿ ಮಾತನಾಡಿ, ಭಾರತದ ಬೃಹತ್ ಸಂವಿಧಾನಕ್ಕೆ ಇವರ ಕೊಡುಗೆ ಅಪಾರ ಹಾಗೂ ಇವರು ಅದ್ಭುತ ಸಂದೇಶ ನೀಡಿದ್ದಾರೆ. ಇತಿಹಾಸವನ್ನು ಮರೆತವರು ಇತಿಹಾಸ ನಿರ್ಮಿಸಲಾರರು, ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು. ವಿದ್ಯಾವಂತರಾಗಿ ಸಂಘಟಿತರಾಗಿ, ಜ್ಞಾನವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೆ ಆಧಾರವಾಗಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಕ ಆಯುಕ್ತರಾದ ಆಯುಕ್ತರಾದ ಜಿ ವಿಜಯ್ ಕುಮಾರ್ ಮಾತನಾಡುತ್ತ . ಬಿ.ಆರ್.ಅಂಬೇಡ್ಕರ್ ಅವರು ಭಾರತದ ಇತಿಹಾಸದಲ್ಲಿ ಸ್ಮರಣೀಯ ವ್ಯಕ್ತಿ. ಭಾರತೀಯ ಸಮಾಜಕ್ಕೆ ಅವರ ಕೊಡುಗೆ ಅಪಾರ. ಏ.14ರಂದು ಅವರ ಜಯಂತಿ ಆಚರಣೆ ದೇಶಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರು ಸಮಾಜ ಸುಧಾರಕರಾಗಿದ್ದರು. ನ್ಯಾಯಶಾಸ್ತ್ರಜ್ಞ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದರು ಎಂದರು. ಹಾಗೆ ಅಸ್ಪೃಶ್ಯತೆ ಹೋಗಲಾಡಿಸಲು ವಿಶೇಷ ಹೋರಾಟ ಮಾಡಿದ ಮಹಾನ್ ಸಾಧಕ ಇವರ ತತ್ವ ಆದರ್ಶ ಗುಣಗಳು ಇಂದಿನ ಯುವಕರಿಗೆ ದಾರಿದೀಪವಾಗಿದೆ ಎಂದು ನುಡಿದರು ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಕೆ ವಿ ಚಂದ್ರಶೇಖರಯ್ಯ
ಚುಡಾಮಣಿ ಪವಾರ್, ಕೇಂದ್ರ ಕಾಣಿಕ ಆಯುಕ್ತರಾದ ರಾಘವೇಂದ್ರ ವಿಜಯಪುರದ ರೇಂಜರ್ ಲೀಡರ್ ಶ್ವೇತಾ. ಜಿಲ್ಲಾ ತರಬೇತಿ ಆಯುಕ್ತರಾದ ಶಿವಶಂಕರ್. ಹಾಗೂ ರಾಜ್ಯದಿಂದ ಆಗಮಿಸಿದ ರೋವರ್ ರೇಂಜರ್ಸ್ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....