Wednesday, September 16, 2026
Wednesday, September 16, 2026

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

Date:

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಹೆಚ್.ಆರ್) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಟಿ. ರವಿಚಂದ್ರನ್, ಮಹಾಪ್ರಬಂಧಕರು ಪ್ರಭಾರಿ (ಸ್ಥಾವರ), ಶ್ರೀ ಎಂ. ಸುಬ್ಬರಾವ್, ಮಹಾಪ್ರಬಂಧಕರು (ಪರಿಸರ ನಿರ್ವಹಣಾ ಇಲಾಖೆ), ಶ್ರೀ ಎಲ್. ಸುಂದರವಡಿವೇಲು, ಮಹಾಪ್ರಬಂಧಕರು ಕಾರ್ಮಿಕರ ಸಮನ್ವಯಾಧಿಕಾರಿ, ಶ್ರೀ ನವೀನ್ ರಾಹುಲ್, ಸಹಾಯಕ ಮಹಾಪ್ರಬಂಧಕರು (ನಗರಾಡಳಿತ ಮತ್ತು ಸಾರ್ವಜನಿಕ ಸಂಪರ್ಕ) ಮತ್ತು ಅಧ್ಯಕ್ಷರು, ಅಸೋಸಿಯೇಷನ್, ಶ್ರೀ ಪಿ. ಅಮೃತ್ ಕುಮಾರ್, ಅಧ್ಯಕ್ಷರು, ಕಾರ್ಮಿಕರ ಸಂಘ, ಶ್ರೀ ಅಜಯ್ ಡಿ. ಸೋಂಕುವಾರ್, ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಮರ್ಪಿಸಿದರು.

ಶ್ರೀ ಚಂದ್ರಕಾಂತ್, ಸಂವಿಧಾನದ ಪ್ರಸ್ತಾವನೆಯನ್ನು ಓದಿದರು ಹಾಗೂ ಶ್ರೀ ಎಮ್.ಎಲ್. ಯೋಗೀಶ್, ಸಹಾಯಕ ಪ್ರಬಂಧಕರು (ಮಾನವ ಸಂಪನ್ಮೂಲ) ನೆರೆದವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು ಮತ್ತು ವಂದನಾರ್ಪಣೆಗೈದರು.

ಶ್ರೀ ಬಿ. ವಿಶ್ವನಾಥ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಡಾ|| ಬಿ.ಆರ್. ಅಂಬೇಡ್ಕರ್ ಹಾಗೂ ಸರ್.ಎಂ.ವಿಶ್ವೇಶ್ವರಾಯ ಅವರ ಜೀವನದಿಂದ ಸಂಕ್ಷಿಪ್ತ ಕಲಿಕಾ ಅಂಶಗಳನ್ನು ನೀಡಿದರು ಮತ್ತು ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರಗಳನ್ನು ಕಲಿಸಲು ಕರೆಯಿತ್ತರು.

ಈ ಸಂದರ್ಭದಲ್ಲಿ ಶ್ರೀ ಟಿ. ರವಿಚಂದ್ರನ್, ಶ್ರೀ ನವೀನ್ ರಾಹುಲ್, ಶ್ರೀ ಪಿ. ಅಮೃತ್ ಕುಮಾರ್ ಮಾತನಾಡಿದರು.

VISL ಶ್ರೀ ಜಗದೀಶ್ ಬಡಿಗೇರ್, ಶ್ರೀ ಕೆ. ಲಕ್ಷ್ಮಣ, ಶ್ರೀ ಎಲ್. ಮಧುಕುಮಾರ್, ಶ್ರೀಮತಿ ಪ್ರೇಮಬಾಯಿ, ಶ್ರೀಮತಿ ರಮ್ಯ, ಶ್ರೀ ಬಿ.ಎಸ್. ವಸಂತ್, ಶ್ರೀಮತಿ ತ್ರಿವೇಣಿ, ಶ್ರೀಮತಿ ಹೇಮಾವತಿ ಮತ್ತು ಕು.ಜಾಹ್ನವಿ ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆಗೈದ ಕಾರ್ಮಿಕರ ಮಕ್ಕಳಿಗೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ನೀಡಲಾಯಿತು.

ಶ್ರೀಮತಿ ರಮ್ಯಾ, ಶ್ರೀಮತಿ ಶೈಲಶ್ರೀ ಮತ್ತು ಶ್ರೀಮತಿ ಪ್ರೇಮಬಾಯಿ ಕಾರ್ಯಕ್ರಮವನ್ನು ನಿರೂಪಿಸಿದರು. ಗಿISಐ ಮಾನವಸಂಪನ್ಮೂಲ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...