ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪ ಮೂಗೂಡ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.
69 ವರ್ಷದ ಮೂಗೂಡ್ತಿ ನಿವಾಸಿ ಇಬ್ರಾಹಿಂ ಅವರು ರೀಪನ್ ಪೇಟೆಯಿಂದ ಮೂಗೂಡ್ತಿಗೆ ಪ್ರಯಾಣಿಸಿ , ಬಸ್ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಾರಿನ ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ರಾಹಿಂ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
