Thursday, June 18, 2026
Thursday, June 18, 2026

ಹುಲಿಕಲ್ ಘಾಟಿ ಕುಸಿತ: ಬಸ್ ಬದಲಿಸಲು ಹತ್ತುವ ಪ್ರಯಾಣಿಕರಿಗೆ ರಕ್ಷಣೆ ಇಲ್ಲದೆ ಅನಾನುಕೂಲ

Date:

ಹುಲಿಕಲ್ ಘಾಟಿ ಕುಸಿತದಿಂದ ಮೂವರು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಿಲ್ಲಾಡಳಿತ ಮಂಡಳಿಯವರು ಪ್ರಯಾಣಕ್ಕೆ ಬಸ್ ಗಳ ಅದಲು ಬದಲು ವ್ಯವಸ್ಥೆ ಕಲ್ಪಿಸಿದ್ದಾರೆ ‌.

ಒಂದು ಕಡೆಯಿಂದ ಇನ್ನೊಂದು ಕಡೆಗೆ ಬಸ್ ಇಳಿದು ಇನ್ನೊಂದು ಬಸ್ ಹತ್ತಲು ಅವಕಾಶ ಕಲ್ಪಿಸಲಾಗಿದೆ.

ಬಸ್ ಇಳಿದು ಹತ್ತುವ ವೇಳೆ ಮೆಟ್ಟಿಲುಗಳ ಮೂಲಕ ಬರಲು ಅವಕಾಶ ನೀಡಲಾಗಿದ್ದು, ಆದರೆ ಮೆಟ್ಟಿಲು ಹತ್ತುವಾಗ ಯಾವುದೇ ರಕ್ಷಣೆ ಇಲ್ಲದೆ ಪ್ರಯಾಣಿಕರ ಪರದಾಡುತ್ತಿದ್ದಾರೆ.

ಕಿರಿದಾದ ಜಾಗದಲ್ಲಿ ಬಸ್ ಇಳಿದು ಹತ್ತುವಾಗ ಪ್ರಯಾಣಿಕರಿಗೆ ಗಾಯಗಳಾಗಿವೆ.

ಸೂಕ್ತ ಮುನ್ನೆಚ್ಚರಿಕೆ ಕ್ರಮಗಳಿಲ್ಲದೇ ಪ್ರಯಾಣಿಕರ ಪರದಾಡುವಂತಾಗಿದ್ದು,
ಬಿಸಿಲಿನಲ್ಲಿ ಮೆಟ್ಟಿಲು ಹತ್ತಲು ಮೆಲ್ಚಾಣಿ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ಚಂಡಿಕಾಂಬ ದೇವಾಲಯದ ಮುಂಭಾಗ ಬಸ್ ಇಳಿದು ಕೆಳಗೆ ಹೋಗ ಬೇಕಾದ ಪರಿಸ್ಥಿತಿ ಇದೆ.

ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳನ್ನು ಸಂಪರ್ಕ ಕಲ್ಪಿಸುವ ಘಾಟಿ ಇದಾಗಿದೆ.

ಪ್ರಯಾಣಿಕರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...