Thursday, June 18, 2026
Thursday, June 18, 2026

ಏಪ್ರಿಲ್ 22 ರಂದು ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪಿಂಚಣಿದಾರ ಕುಂದು ಕೊರತೆ ಆನ್ ಲೈನ್ ಮೂಲಕ ಕೇಳಬಹುದು

Date:

ಮೈಸೂರು ವಿಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಉಡುಪಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಸರ್ಕಾರಿ ನಿವೃತ್ತ/ಕುಟುಂಬ ಪಿಂಚಣಿದಾರರ ಕುಂದುಕೊರತೆಗಳ ನಿವಾರಣೆಗಾಗಿ ಹಾಸನದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಏ.22 ರಂದು ಬೆಳಗ್ಗೆ 11.00ಕ್ಕೆ “ಪಿಂಚಣಿ ಅದಾಲತ್” ಹಾಗೂ ಮಧ್ಯಾಹ್ನ ಜಿಪಿಎಫ್ ಚಂದಾದಾರರ ಕುಂದುಕೊರತೆಗಳ ನಿವಾರಣೆಗಾಗಿ ”ಜಿಪಿಎಫ್ ಅದಾಲತ್” ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಪಿಂಚಣಿದಾರರು ಬೆಳಿಗ್ಗೆ 11 ಗಂಟೆಗೆ ಎ.ಸಿ.ಕಚೇರಿಯ ಕೆ-ಸ್ವಾನ್-ವಿ.ಸಿ. ಸಭಾಂಗಣದಲ್ಲಿ ನಡೆಯುವ ಪಿಂಚಣಿ ಮತ್ತು ಜಿಪಿಎಫ್ ಅದಾಲತ್‌ನಲ್ಲಿ ಭಾಗವಹಿಸಿ ರಾಜ್ಯ ಸೇವಾ ಹಾಗೂ ಕುಟುಂಬ ಪಿಂಚಣಿಗೆ ಸಂಬಂಧಿಸಿದ ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಬಹುದಾಗಿದೆ. ಅಥವಾ ಶಿವಮೊಗ್ಗ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಯಲ್ಲಿ ಮುಂಚಿತವಾಗಿ ವಿವರಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಖಜಾನೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...