Shree Galidurga Deviಶಿಕಾರಿಪುರ ತಾಲ್ಲೂಕಿನ ಜವಾಗಟ್ಟಿ ಗ್ರಾಮದ ಆರಾಧ್ಯ ದೈವ ಶ್ರೀ ಗಾಳಿ ದುರ್ಗಾದೇವಿ.
ಶ್ರೀದೇವಿಯ ನೂತನ ದೇವಸ್ಥಾನದ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವದ ಪುಣ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಿಪೂರ್ವಕ ನಮನಗಳನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಸಲ್ಲಿಸಿದರು.
ಬ್ರಾಹ್ಮಿ ಮುಹೂರ್ತದಲ್ಲಿ ನಡೆದ ಕುಂಭಾಭಿಷೇಕ, ದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿವಿಧ ಹೋಮ-ಹವನಗಳಲ್ಲಿ ಭಾಗಿಯಾಗಿ ನಾಡಿನ ಸುಖ-ಶಾಂತಿಗಾಗಿ ಪ್ರಾರ್ಥಿಸಲಾಯಿತು.
Shree Galidurga Devi ಕಾರ್ಯಕ್ರಮದಲ್ಲಿ ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಶ್ರೀ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳು, ತೊಗರ್ಸಿಯ ಮಲೆಹಿರೇಮಠದ ಶ್ರೀ ಷ|| ಬ್ರ|| ಮಹಾಂತದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಪಂಚವಣ್ಣಿಗೆಮಠದ ಶ್ರೀ ಷ|| ಬ್ರ|| ಚನ್ನವೀರದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಹಲವು ಪೂಜ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
