Wednesday, September 16, 2026
Wednesday, September 16, 2026

ಶಿವಮೊಗ್ಗದ ಒಂದನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ

Date:

ಶಿವಮೊಗ್ಗ ನಗರದ ಜನತೆಯ ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪನವರು ಇಂದು ವಾರ್ಡ್ ನಂಬರ್ 01ರ ಪಾರ್ವತಮ್ಮ ಬಡಾವಣೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಡಾವಣೆಯಾದ್ಯಂತ ಸಂಚರಿಸಿದ ಶಾಸಕರು, ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ಮುಖ್ಯವಾಗಿ ಒಳಚರಂಡಿ (UGD) ವ್ಯವಸ್ಥೆಯಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಹಾಗೂ ರಸ್ತೆಗಳ ದುರಸ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಮಾಹಿತಿ ಪಡೆದರು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದ ಅವರು, ಕಾಮಗಾರಿಗಳ ವಿಳಂಬಕ್ಕೆ ಅಧಿಕಾರಿಗಳನ್ನು ಪ್ರಶ್ನಿಸಿದರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಚಂದ್ರಪ್ಪ, ರಾಜು, ಮಹಾನಗರ ಪಾಲಿಕೆಯ ಅಭಿಯಂತರರು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...