Wednesday, April 22, 2026
Wednesday, April 22, 2026

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

Date:

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ನಡೆದು ಇಂದಿಗೆ ಭರ್ತಿ ಒಂದು ವರ್ಷ ಸಂದಿದೆ. ಈ ಕರಾಳ ದಿನದಂದು ದೇಶಕ್ಕಾಗಿ ಮತ್ತು ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಎಲ್ಲಾ ಅಮಾಯಕ ಚೇತನಗಳಿಗೆ ಭಕ್ತಿಪೂರ್ವಕ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕರಾದ ಎಸ್.ಎನ್.ಚೆನ್ನಬಸಪ್ಪನವರು ಹೇಳಿದ್ದಾರೆ.

ಶಿವಮೊಗ್ಗದ ವೀರ ಪುತ್ರ ಮಂಜುನಾಥ್ ಅವರಿಗೆ ನಮನ:
ಈ ದುರಂತದಲ್ಲಿ ನಾವು ನಮ್ಮ ಶಿವಮೊಗ್ಗದ ಹೆಮ್ಮೆಯ ಪುತ್ರ ಶ್ರೀ ಮಂಜುನಾಥ್ ಅವರನ್ನು ಕಳೆದುಕೊಂಡೆವು. ಅವರ ಅಗಲಿಕೆಯ ನೋವು ಇಂದಿಗೂ ಮಾಸಿಲ್ಲ. ಮಗನ ಶೈಕ್ಷಣಿಕ ಸಾಧನೆಯನ್ನು ಸಂಭ್ರಮಿಸಲು ಪ್ರವಾಸಕ್ಕೆ ತೆರಳಿದ್ದ ಮಂಜುನಾಥ್ ಅವರು ಉಗ್ರರ ಗುಂಡಿಗೆ ಬಲಿಯಾದದ್ದು ಕೇವಲ ಒಂದು ಕುಟುಂಬದ ನಷ್ಟವಲ್ಲ, ಅದು ಇಡೀ ಶಿವಮೊಗ್ಗಕ್ಕೆ ಆದ ನಷ್ಟ. ಅವರ ಸರಳತೆ ಮತ್ತು ಮೃದು ಸ್ವಭಾವ ಇಂದಿಗೂ ನಮ್ಮ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದೆ. ಮಂಜುನಾಥ್ ಅವರ ಕುಟುಂಬದ ಜೊತೆಗೆ ನಾವೆಲ್ಲರೂ ಸದಾ ಇರುತ್ತೇವೆ ಎಂಬ ಭರವಸೆಯನ್ನು ಈ ಮೂಲಕ ನೀಡಲು ಬಯಸುತ್ತೇನೆ ಎಂದಿದ್ದಾರೆ

ಕೇಂದ್ರ ಸರ್ಕಾರದ ‘ಆಪರೇಷನ್ ಸಿಂಧೂರ ಎಂಬ ದಿಟ್ಟ ನಡೆಗೆ ಅಭಿನಂದನೆ:
ಕಳೆದ ಒಂದು ವರ್ಷದಲ್ಲಿ ಕೇಂದ್ರದ ಶ್ರೀ ನರೇಂದ್ರ ಮೋದಿ ಅವರ ಸರ್ಕಾರವು ಭಯೋತ್ಪಾದನೆಯ ವಿರುದ್ಧ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳು ಶ್ಲಾಘನೀಯ.

  • ದಾಳಿಯ ನಂತರ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದ ಭಾರತೀಯ ಸೇನೆಯ ಶೌರ್ಯಕ್ಕೆ ನಮನಗಳು.
  • ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೇರುಗಳನ್ನು ಕಿತ್ತೆಸೆಯಲು ಮೋದಿಯವರ ಸರ್ಕಾರ ತೋರಿದ ರಾಜಕೀಯ ಇಚ್ಛಾಶಕ್ತಿ ಅಭೂತಪೂರ್ವ.
  • “ಸೇಡಿನ ಕ್ರಮಕ್ಕಿಂತ ಹೆಚ್ಚಾಗಿ, ಭಯೋತ್ಪಾದನೆಗೆ ಶಾಶ್ವತ ಅಂತ್ಯ ಹಾಡಬೇಕು” ಎಂಬ ಪ್ರಧಾನಿಯವರ ಗುರಿಯು ಇಂದು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ.

S.N. Chennasappa ಅಂದು ಉಗ್ರರು ತೋರಿದ ಹೇಡಿತನಕ್ಕೆ ಇಂದು ಭಾರತದ ಸೈನಿಕರು ಅಷ್ಟೇ ತೀವ್ರವಾಗಿ ಉತ್ತರಿಸುತ್ತಿದ್ದಾರೆ. ಮಂಜುನಾಥ್ ಅವರಂತಹ ಅಮಾಯಕರ ರಕ್ತ ವ್ಯರ್ಥವಾಗಲು ಈ ಸರ್ಕಾರ ಬಿಡುವುದಿಲ್ಲ ಎಂಬ ನಂಬಿಕೆ ಜನಮಾನಸದಲ್ಲಿ ಅಡಕವಾಗಿದೆ. ದೇಶದ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....

Shivamogga Rangayana ಏಪ್ರಿಲ್ 25 & 26 ರಂದು “ಸ್ವಾತಂತ್ರ್ಯದ ಓಟ” , ಶಿವಮೊಗ್ಗದ ರಂಗಾಯಣದಲ್ಲಿ ನಾಟಕ ಪ್ರದರ್ಶನ

Shivamogga Rangayana ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಲೇಖಕ...