Thursday, June 18, 2026
Thursday, June 18, 2026

ಗುರುಪುರ ಬಿಜಿಎಸ್ ಶಾಲೆಗೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Date:

ಶಿವಮೊಗ್ಗ ಹೊರ ವಲಯದಲ್ಲಿರುವ ಗುರುಪುರದ ಬಿಜಿಎಸ್ ಪ್ರೌಢಶಾಲಾ ವಿಭಾಗದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವುದು ವಿಶೇಷ ಸಂಗತಿ.

ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು 84, ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು 83,ಅತ್ಯುನ್ನತ ಶ್ರೇಣಿಯಲ್ಲಿ18,ಉನ್ನತ ಶ್ರೇಣಿಯಲ್ಲಿ 23, ಪ್ರಥಮ ಶ್ರೇಣಿಯಲ್ಲಿ19,ದ್ವಿತೀಯ ದರ್ಜೆಯಲ್ಲಿ12, ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.ಶೇ 98.8 ಫಲಿತಾಂಶ ಬಂದಿರುತ್ತದೆ.

ಗ್ರಾಮೀಣ ಭಾಗದ ಹೆಚ್ಚು ಮಕ್ಕಳನ್ನು ಹೊಂದಿರುವ ಈ ಪ್ರೌಢಶಾಲೆಯಲ್ಲಿ ನುರಿತ ಶಿಕ್ಷಕರು ಗುರುಕುಲ ಮಾದರಿಯಲ್ಲಿ ವಸತಿ ವ್ಯವಸ್ಥೆಯ ಸಹಿತ ಶಿಕ್ಷಣ ನೀಡುತ್ತಿರುವುದು ಫಲಿತಾಂಶ ಹೆಚ್ಚಳಕ್ಕೆ ಕಾರಣವಾಗಿದೆ.

ಈ ಶಿಕ್ಷಣ ಸಂಸ್ಥೆಯ ಆವಣದಲ್ಲಿ ಸುಂದರ ಪ್ರಕೃತಿಯ ವಾತಾವರಣವಿದ್ದು, ಸುಸಜ್ಜಿತವಾದ ಕೊಠಡಿಗಳು, ಗ್ರಂಥಾಲಯ, ಕ್ರೀಡಾಂಗಣ,ಪ್ರಯೋಗಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಕಂಡು ಬರುವುದು ಮತ್ತೊಂದು ವಿಶೇಷ.

ಪ್ರತೀಕ್ಷಾ ಎನ್.ಆರ್.625ಕ್ಕೆ 614 ಅಂಕ ಪಡೆದು, ಶಾಲೆಗೆ ಪ್ರಥಮ ಸ್ಥಾನ ಪಡೆದರೆ,ಸುಬ್ರಮಣ್ಯ ಆರ್. 625 ಕ್ಕೆ 607 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಾನ್ವಿ ಎಂ.605, ಪ್ರೀತಮ್ ಎಲ್. 603, ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ನಾದ ಮಯಾನಂದನಾಥ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.xx

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...