Sunday, April 26, 2026
Sunday, April 26, 2026

Department of School Education ಪ್ರಥಮ ಪಿಯುಸಿ ದಾಖಲಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Department of School Education ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ ಪ್ರಥಮ ಪಿ.ಯು.ಸಿ.ಯ ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಕೋರ್ಸ್ ಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.
2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಸಾಮಾನ್ಯ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಏಪ್ರಿಲ್ 29 ರೊಳಗಾಗಿ ಜಾಲತಾಣ http://kreis.karnataka.gov.in ರಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಯಾ ವಸತಿ ಕಾಲೇಜುಗಳಲ್ಲಿ ದಾಖಲಾತಿಯ ಸಂದರ್ಭದಲ್ಲಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್, ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Department of School Education ಕಾಲೇಜುಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆನವೇರಿ-57, ಭದ್ರಾವತಿ ತಾಲೂಕು-8105352698 ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

SN Channabasappa ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು.ಶಿಸ್ತು ಮತ್ತು ಸೇವಾ ಮನೋಭಾವನೆ ಮೈಗೂಡಿಸಿಕೊಳ್ಳಬೇಕು- ಶಾಸಕ ಚನ್ನಿ.

SN Channabasappa "ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು, ಶಿಸ್ತು ಮತ್ತು ಸೇವಾ ಮನೋಭಾವನೆಯನ್ನು...

S.N. Channabasappa ಡಾ.ರಾಜ್ ಅವರ ಸಿನಿಮಾ, ಪಾತ್ರಗಳು ಸಮಾಜ ತಿದ್ದುವ ರೀತಿಯಲ್ಲಿವೆ- ಎಸ್.ಎನ್.ಚನ್ನಬಸಪ್ಪ.

S.N. Channabasappa ಡಾ.ರಾಜ್‌ಕುಮಾರ್ ಸಿನಿಮಾಗಳು ಜೀವನ ಪಾಠದಂತಿದ್ದು, ಅವರ ಪ್ರತಿ ಪಾತ್ರ...

Prabhuling Kavalikatti ಜೋಗದಲ್ಲಿನ ಕಾಮಗಾರಿಗಳು ಗುಣಮಟ್ಟವಿರಲಿ. ನಿಗದಿತ ಅವಧಿಯೊಳಗೆ‌ ಪೂರೈಸಿ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ...

Kuvempu university ಕುವೆಂಪು ವಿವಿ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಿಂದ ಆವರಣ ಸ್ವಚ್ಛತೆ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರ

Kuvempu university ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ...