Sunday, August 2, 2026
Sunday, August 2, 2026

Department of School Education ಪ್ರಥಮ ಪಿಯುಸಿ ದಾಖಲಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Department of School Education ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ ಪ್ರಥಮ ಪಿ.ಯು.ಸಿ.ಯ ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಕೋರ್ಸ್ ಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.
2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಸಾಮಾನ್ಯ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಏಪ್ರಿಲ್ 29 ರೊಳಗಾಗಿ ಜಾಲತಾಣ http://kreis.karnataka.gov.in ರಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಯಾ ವಸತಿ ಕಾಲೇಜುಗಳಲ್ಲಿ ದಾಖಲಾತಿಯ ಸಂದರ್ಭದಲ್ಲಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್, ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Department of School Education ಕಾಲೇಜುಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆನವೇರಿ-57, ಭದ್ರಾವತಿ ತಾಲೂಕು-8105352698 ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...