Monday, April 27, 2026
Monday, April 27, 2026

Kuvempu University ಡಿವಿಎಸ್ ಕಾಲೇಜಿಗೆ “ಕಾಲೇಜು ಕ್ರೀಡಾಕೂಟ-26 “ಸಮಗ್ರ ಪ್ರಶಸ್ತಿ

Date:

Kuvempu University ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 38ನೇ ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ 2025-26ರಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಪುರುಷರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮತ್ತು
ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಯುಸಿಪಿಇ ಶಂಕರಘಟ್ಟ ದ್ವಿತೀಯ ಸ್ಥಾನ ಹಾಗೂ ಎಲ್.ಬಿ & ಎಸ್.ಬಿ.ಎಸ್ ಕಾಲೇಜು ಸಾಗರ ತೃತೀಯ ಸ್ಥಾನ ಪಡೆದುಕೊಂಡಿದೆ.
ಮಹಿಳಾ ವಿಭಾಗದಲ್ಲಿ ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದು, ಡಿವಿಎಸ್ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ದ್ವಿತೀಯ ಸ್ಥಾನ ಹಾಗೂ ಕೆ.ಜಿ.ಎಫ್.ಜಿ.ಸಿ ಹೊಸನಗರ ತೃತೀಯ ಸ್ಥಾನ ಪಡೆದುಕೊಂಡಿದೆ.
ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಕ್ರೀಡಾಪಟುಗಳಿಗೆ ಶುಭಕೋರಿದರು. ಕ್ರೀಡಾಕೂಟದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ 32ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದವು. 220 ಪುರುಷ ಕ್ರೀಡಾಪಟುಗಳು ಹಾಗೂ 150 ಮಹಿಳಾ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
ಅತಿಥೇಯ ಕಾಲೇಜಿನ ಧನಂಜಯ ಬಿ ಪುರುಷರ ವಿಭಾಗದಲ್ಲಿ ಹಾಗೂ ಭೂಮಿಕಾ ಕೆ.ಎನ್ ಮಹಿಳಾ ವಿಭಾಗದಲ್ಲಿ ಬೆಸ್ಟ್ ಅಥ್ಲೀಟ್ ಪ್ರಶಸ್ತಿ ಪಡೆದುಕೊಂಡರು.
Kuvempu University ವಿಶೇಷ ದಾಖಲೆಯಾಗಿ ಡಿವಿಎಸ್ ಕಾಲೇಜಿನ ಭೂಮಿಕಾ ಕೆ ಎನ್ ಅವರು ಲಾಂಗ್ ಜಂಪ್ ನಲ್ಲಿ 5.31 ಮೀಟರ್ ಮತ್ತು ಟ್ರಿಪಲ್ ಜಂಪ್ ನಲ್ಲಿ 11.20 ಮೀಟರ್ ಜಿಗಿದು ನೂತನ ಕ್ರೀಡಾಕೂಟ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ಪಿ.ದಿನೇಶ್ ಅವರು ವಿಜೇತರನ್ನು ಅಭಿನಂದಿಸಿದರು. ದೇಶಿಯ ವಿದ್ಯಾಶಾಲಾ ಸಮಿತಿ ಸಹಕಾರ್ಯದರ್ಶಿ ಡಾ. ಎಂ. ಸತೀಶ್ ಕುಮಾರ್ ಶೆಟ್ಟಿ, ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎನ್.ಡಿ.ವಿರೂಪಾಕ್ಷ, ಸಹಾಯಕ ನಿರ್ದೇಶಕ ಡಾ. ರವಿಂದ್ರ, ಡಿವಿಎಸ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಸಚಿನ್ ಕೆ, ಹಾಗೂ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ...

B.Y. Raghavendra ಕಳೆದ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ:ವಿವಿಧೆಡೆ ಹಾನಿ, ತಕ್ಷಣ ಕ್ರಮಕೈಗೊಳ್ಳಿ-ಸಂಸದ ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ...

CM Siddharamaiah ಒಳಮೀಸಲಾತಿ ಹಂಚಿಕೆ: ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ನೀಡಲಾಗಿದೆ- ಸಿದ್ಧರಾಮಯ್ಯ.

CM Siddharamaiah ಒಳಮೀಸಲಾತಿ ಹಂಚಿಕೆ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...

B.Y. Raghavendra ಸಾಗರ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ಪ್ರಸ್ತಾವನೆ: ಸ್ಪಷ್ಟ ವಿರೋಧವಿದೆ- ಸಂಸದ ರಾಘವೇಂದ್ರ

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...