ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ ವಾರ್ಷಿಕೋತ್ಸವ ಮತ್ತು ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ: 03-05-2026ನೇ ಭಾನುವಾರ ಬೆಳಿಗ್ಗೆ10.30ಗಂಟೆಗೆ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಂದರೆ ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಓದಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ಸದಸ್ಯರ ಮಕ್ಕಳಿಗೆ ಒಟ್ಟು 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾನ ಮನಸ್ಕ ಅತ್ಯುತ್ತಮ ವರದಿ ಮಾಡುತ್ತಿರುವ 10 ಮಂದಿ ಪತ್ರಕರ್ತರಿಗೆ 05 ಮಂದಿ ಸಂಪಾದಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪತ್ರಿಕಾ ವಿತರಕರ ಸಂಘದ ಮುಖ್ಯಸ್ಥರಿಗೆ, ಗಣ್ಯರಿಗೆ ಸನ್ಮಾನ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸಿ.ವಿ. ರಾಘವೇಂದ್ರರಾವ್, ಕಾಮ್ರೇಡ್ ಲಿಂಗಪ್ಪ ಮತ್ತು ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್, ಪಬ್ಲಿಕ್ ಟಿ.ವಿ. ವರದಿಗಾರ ಶಶಿಧರ, ಬಿ-ಟಿ.ವಿ. ವರದಿಗಾರ ಅನಿಲ್, ಸಾಗರದ ಪತ್ರಕರ್ತ ಓಂಕಾರ್ ತಾಳಗುಪ್ಪ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.
ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಮಾಧ್ಯಮ ಸಲಹೆಗಾರರಾದ ಜಗಳೂರು ಲಕ್ಷö್ಮಣರಾವ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಜಿ. ನಾಗರಾಜ (ರಾಜು) ವಹಿಸಲಿದ್ದಾರೆ.
ಮೀಡಿಯಾ, ನಾನ್ ಮೀಡಿಯಾ ಪತ್ರಕರ್ತರು, ವಿವಿಧ ಪತ್ರಿಕಾ ಸಂಘಟನೆಯ ಪತ್ರಕರ್ತರು ಎಂಬ ತಾರತಮ್ಯವಿಲ್ಲದೇ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸಮಾನ ಮನಸ್ಕ ಪತ್ರಕರ್ತರಿಗೆ ಮತ್ತು ವಿವಿಧ ಗಣ್ಯರಿಗೆ, ವಿವಿಧ ಸಂಘಟನೆಯ ಮುಖಂಡರಿಗೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಗಿದೆ. ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಘಟಕದ ವತಿಯಿಂದ ಕೋರಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Date:
