Wednesday, September 16, 2026
Wednesday, September 16, 2026

S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ

Date:

S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ‘ನಾರಿ ಶಕ್ತಿ ವಂದನ ಅಧಿನಿಯಮ’ವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ. ಅಧಿಕಾರಕ್ಕಾಗಿ ಹಂಬಲಿಸುವ ಕಾಂಗ್ರೆಸ್, ಮಹಿಳೆಯರಿಗೆ ಸಿಗಬೇಕಾದ ಮೀಸಲಾತಿಯನ್ನು ತಡೆಯುವ ಮೂಲಕ ತನ್ನ ನೈಜ ಮುಖವನ್ನು ಬಯಲು ಮಾಡಿದೆ.” ಎಂದು ತಿಳಿಸಿದರು.

S.N. Channabasappa ಪ್ರತಿಭಟನೆಯಲ್ಲಿ ಸಂಸದರಾದ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್ ಕೆ ಸಿದ್ದರಾಮಣ್ಣ, ಶ್ರೀ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಧುರ ಶಿವಾನಂದ್, ಮಹಿಳಾ ಮೋರ್ಚಾ ನಗರಾಧ್ಯಕ್ಷರಾದ ಶ್ರೀಮತಿ ರಶ್ಮಿ ಶ್ರೀನಿವಾಸ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಶ್ರೀನಿವಾಸ್ ಸೇರಿದಂತೆ ನೂರಾರು ಸಂಖ್ಯೆಯ ಆಕ್ರೋಶಿತ ಮಹಿಳಾ ಕಾರ್ಯಕರ್ತೆಯರು, ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...