Thursday, June 18, 2026
Thursday, June 18, 2026

Dream Dance Academy ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ- ಫಾ.ರಾಬರ್ಟ್ ಡಿ’ ಮೆಲ್ಲೊ

Date:

Dream Dance Academy ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿದ್ದು, ಪೋಷಕರಾದವರು ಮಕ್ಕಳ ಮೇಲೆ ಒತ್ತಡ ಹೇರುವುದು ಸಲ್ಲದು ಎಂದು ಹೊಸಪೇಟೆ ಬಡಾಣವೆಯ ಸಂತ ಸೆಬಾಸ್ಟಿಯನ್ ಚರ್ಚ್ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೋ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ಡ್ರೀಮ್ ಡ್ಯಾನ್ಸ್ ಅಕಾಡೆಮಿಯ ದಶಮಾನೋತ್ಸವ ಅಂಗವಾಗಿ ಹಮ್ಮಿಕೊಂಡ ಸೊರಬ ನೃತ್ಯೋತ್ಸವ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆಗಳಲ್ಲಿ ತೊಡಗುವುದರಿಂದ ಮಕ್ಕಳಲ್ಲಿ ಸೋದರತೆಯ ಬಾಂಧವ್ಯದ ಜೊತೆ ಉತ್ತಮ ಸಂಸ್ಕಾರ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿದ್ದಾರೆ. ಗ್ರಾಮೀಣ ಭಾಗದ ಅನೇಕ ಪ್ರತಿಭೆಗಳನ್ನು ರಾಜ್ಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಡಿಡಿ ಅಕಾಡೆಮಿಗೆ ಸಲ್ಲುತ್ತದೆ ಎಂದರು.
ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಮಕ್ಕಳನ್ನು ಅಂಕಗಳಿಕೆಗೆ ಮಾತ್ರ ಸೀಮಿತಗೊಳಿಸದೇ ಅವಲ್ಲಿನ ಸೃಜನಾತ್ಮಕ ಕಲೆಗಳನ್ನು ಗುರುತಿಸಬೇಕು. ಈ ಮೂಲಕ ಅವರನ್ನು ಸಮಾಜದ ಸತ್ಪçಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಮಕ್ಕಳನ್ನು ಸಂಸ್ಕಾರವAತರನ್ನಾಗಿಸಿದಾಗ ವೃದ್ಧಾಶ್ರಮಗಳ ಸಂಖ್ಯೆ ಕುಂಠಿತವಾಗಲಿದೆ ಎಂದರು.
ಡ್ರೀಮ್ಸ್ ಡ್ಯಾನ್ಸ್ ಅಕಾಡೆಮಿ ಮುಖ್ಯಸ್ಥ ಹಾಗೂ ಡ್ಯಾನ್ಸ್ ಮಾಸ್ಟರ್ ಸ್ಟೀವನ್ ಮಾತನಾಡಿ, ನ್ಯತ್ಯ ತರಬೇತಿ ಸಂಸ್ಥೆಯನ್ನು ಆರಂಭಿಸಿದಾಗ ಹಲವಾರು ಸಮಸ್ಯೆಗಳು ಎದುರಾದವು. ಅವುಗಳನ್ನು ನಿವಾರಿಸಿಕೊಂಡು ನೂರಾರು ವಿದ್ಯಾರ್ಥಿಗಳಿಗೆ ನ್ಯತ್ಯವನ್ನು ಕಲಿಸಲಾಗಿದೆ. ಕೋವಿಡ್ ನಂತಹ ಸಂದರ್ಭದಲ್ಲಿ ಸಂಸ್ಥೆಯನ್ನು ನಡೆಸುವುದೇ ದುಸ್ಥರವಾಗಿತ್ತು. ಈ ವೇಳೆ ಉದ್ಯಮಿ ನಾಗರಾಜ ಗುತ್ತಿ ಅವರು ಮಾಡಿದ ಸಹಾಯವನ್ನು ಮರೆಯುವಂತಿಲ್ಲ. ಅಲ್ಲದೇ, ಹೊಸಪೇಟೆ ಬಡಾವಣೆಯ ಪರಶುರಾಮ್ ಮತ್ತು ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಸಂಸ್ಥೆಯು ಹತ್ತು ವರ್ಷಗಳನ್ನು ಪೂರೈಸಿ ಮುನ್ನೆಡೆಯುತ್ತಿರುವುದು ಸಂತಸ ತಂದಿದೆ ಎಂದರು.
Dream Dance Academy ಇದೇ ಸಂದರ್ಭದಲ್ಲಿ ಕಿರುತೆರೆ ಕಲಾವಿದೆ ಅನಘಾ, ಸಂಸ್ಥೆಯ ಹಳೇ ವಿದ್ಯಾರ್ಥಿಗಳಾದ ನಿವೇದಿತಾ ಹಾಗೂ ಸ್ಪಂದನಾ, ಶಿವಮೊಗ್ಗದ ಡ್ಯಾನ್ಸ್ ಸ್ಟೆಪ್ ಹೋಲ್ಡರ್‌ನ ಅರುಣ್ ರಾಜ್ ಶೆಟ್ಟಿ, ನೃತ್ಯ ತರಬೇತುದಾರರಾದ ಪ್ರಶಾಂತ್, ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.
ಡ್ಯಾನ್ಸ್ ಸ್ಟೆಪ್ ಹೋಲ್ರ‍್ಸ್ನ ಅರುಣ್ ರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುಂಡಶೆಟ್ಟಿಕೊಪ್ಪದ ಜ್ಞಾನ ಸಹ್ಯಾದಿ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲೆ ಡಾ. ಮೋನಿಕಾ ಡಿಸೋಜಾ, ಸಮಾಜ ಸೇವಕ ಶಂಕರ್ ಶೇಟ್, ರೋಟರಿ ಕ್ಲಬ್ ಅಧ್ಯಕ್ಷ ಜೆ.ಎಸ್. ಮಹಾಂತೇಶ್, ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಉದ್ಯಮಿ ನಾಗರಾಜ ಗುತ್ತಿ, ಡಿ.ಎಸ್. ಪ್ರಶಾಂತ್ ದೊಡ್ಮನೆ ಸೇರಿದಂತೆ ಇತರರಿದ್ದರು. ನಾಗರಾಜ್ ಸಂಜನ್, ಕವನಾ ನಿರ್ವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...