Sunday, August 2, 2026
Sunday, August 2, 2026

Backward Classes Welfare Department ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸುವರ್ಣ ವಿಧಾನಸೌಧ, ಹಲಗಾ, ಬೆಳಗಾವಿ-590010 ಇಲ್ಲಿಗೆ ಮೇ.11 ರೊಳಗಾಗಿ ಸಲ್ಲಿಸುವುದು.

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.

ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

ಜನ್ಮ ದಿನಾಂಕ ಮತ್ತು ವಯಸ್ಸು ದಿ:11-05-2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯುಘ ದಿ:11-05-2006 ರಿಂದ ದಿ:11-03-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ತರಬೇತಿಯನ್ನು ಬೆಳಗಾವಿಯಲ್ಲಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ & ಆದಾಯ ಪ್ರಮಾಣ ಪತ್ರಗಳ ಮೂಲ ದಾಖಲೆಗಳೊಂದಿಗೆ ಭಾಗವಹಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.

ತರಬೇತಿ ಅವಧಿಯು 4 ತಿಂಗಳುಗಳಾಗಿದ್ದು, ಅಭ್ಯರ್ಥಿಗಳಿಗೆ ತರಬೇತಿ ನೀಡಲು ತಗಲುವ ವಾಸ್ತವಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸಲಾಗುತ್ತದೆ. ಒಂದು ಜೊತೆ ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿಯ ಸಮವಸ್ತ್ರವನ್ನು ನೀಡಲಾಗುವುದು.

Backward Classes Welfare Department ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳಬೇಕಾಗಿದ್ದು, ವಸತಿ ಮತ್ತು ಊಟದ ಸೌಲಭ್ಯವನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯನ್ನು ಪೂರ್ಣಗೊಳಿಸದೆ ಮೊಟಕುಗೊಳಿಸಿದಲ್ಲಿ ಅಂತಹ ಅಭ್ಯರ್ಥಿಯ ತರಬೇತಿ ವೆಚ್ಚವನ್ನು ಆ ಅಭ್ಯರ್ಥಿ ಮತ್ತು ಅವರ ತಂದೆ/ತಾಯಿ/ಪೋಷಕರಿಂದ ವಸೂಲಿ ಮಾಡಲಾಗುವುದು.

ತರಬೇತಿಗೆ ಆಯ್ಕೆಯಾಗುವ ಅಭ್ಯಥಿಗಳಿಗೆ 4 ತಿಂಗಳ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0831-2225078 ಮತ್ತು 08182-2407221 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...