Thursday, August 6, 2026
Thursday, August 6, 2026

Kuvempu University ಗ್ರಾಮೀಣ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುತ್ತವೆ: ಮಾಧುರಾವ್

Date:

Kuvempu University ಗ್ರಾಮೀಣ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸುತ್ತವೆ ಎಂದು ಕೋಮಾರನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಮಾಧುರಾವ್ ಹೇಳಿದರು.
ಅವರು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಮಂಗಳವಾರ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ “ಸಮಾಜಕಾರ್ಯ ಗ್ರಾಮೀಣ ಶಿಬಿರ- 2026 ”ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕೈಗೊಂಡ ಸ್ವಚ್ಛತಾ ಕಾರ್ಯ, ಆರೋಗ್ಯ ಶಿಬಿರ ಹಾಗೂ ಜನಜಾಗೃತಿ ಕಾರ್ಯಕ್ರಮಗಳು ಗ್ರಾಮಾಭಿವೃದ್ಧಿಗೆ ಸಹಕಾರಿ ಆಗಿದ್ದು, ಇಂತಹ ಶಿಬಿರಗಳು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ವಿದ್ಯಾರ್ಥಿಗಳು ನಡೆಸಿದ ಸೇವಾ ಕಾರ್ಯಗಳನ್ನು ಪ್ರಶಂಸಿಸಿದರು. ಶಿಬಿರದ ಅವಧಿಯಲ್ಲಿ ಕೈಗೊಂಡ ಸ್ವಚ್ಛತಾ ಅಭಿಯಾನ, ಆರೋಗ್ಯ ಶಿಬಿರ, ಜನಜಾಗೃತಿ ಕಾರ್ಯಕ್ರಮಗಳು ಹಾಗೂ ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ಮೆಚ್ಚಿ, ಪ್ರಶಿಕ್ಷಣಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲೆಂದು ಹಾರೈಸಿದರು.
Kuvempu University ಮುಖ್ಯ ಅತಿಥಿಗಳಾಗಿ ಗ್ರಾಮದ ಮುಖಂಡರಾದ ಮಂಜುನಾಥ್, ಸವಿತಾ, ರವಿಕುಮಾರ್, ಸಾಕಮ್ಮ ಹಾಗೂ ಆನಂದರಾವ್ ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು.
ಸಂದರ್ಭದಲ್ಲಿ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿ ವರ್ಗದವರು, ರಂಗಸ್ವಾಮಿ, ಸಮಾಜಕಾರ್ಯ ವಿಭಾಗದ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....