Sunday, August 2, 2026
Sunday, August 2, 2026

VISL Bhadravati ಮೃತ ವಿನೋದ ಕುಮಾರ್ ಕುಟುಂಬಸ್ಥರಿಗೆ, ಗುತ್ತಿಗೆದಾರರ ಕಡೆಯಿಂದ ₹8 ಲಕ್ಷ ಪರಿಹಾರ – ಶಾಸಕ ಬಿ.ಕೆ.ಸಂಗಮೇಶ್ವರ್

Date:

VISL Bhadravati ವಿ ಐ ಎಸ್ ಎಲ್ ಕಾರ್ಖಾನೆಯಲ್ಲಿ ಸೋಮವಾರ ಕ್ರೇನ್ ಮೂಲಕ ಸಾಮಗ್ರಿಗಳನ್ನು(ಬಿಲ್ಲೆಡ್) ಇಳಿಸುವ ಸಂದರ್ಭದಲ್ಲಿ ಕೇಬಲ್ ತುಂಡಾಗಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ, ಭದ್ರಾವತಿ ಗುತ್ತಿಗೆ ಕಾರ್ಮಿಕ ಸಂಘದ ಮಾಜಿ ಉಪಾಧ್ಯಕ್ಷರಾದ ಶ್ರೀ ವಿನೋದ್ ಕುಮಾರ್ ಅವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ ಸಂತಾಪ ವ್ಯಕ್ತಪಡಿದ್ದಾರೆ.

ಈ ಸಂಬಂಧ ವಿನೋದ್ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ವಿ ಐ ಎಸ್ ಎಲ್ ಕಾರ್ಖಾನೆಯ ಅಧಿಕಾರಿಗಳು ಮತ್ತು ಗುತ್ತಿಗೆ ಕಾರ್ಮಿಕರೊಂದಿಗೆ ಚರ್ಚಿಸಿ ಹಾಗೂ ಗುತ್ತಿಗೆದಾರರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮೃತ ಗುತ್ತಿಗೆ ಕಾರ್ಮಿಕರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲು ಸೂಚಿಸಿದರು.

VISL Bhadravati ಕಾರ್ಮಿಕರ ಪರವಾಗಿ ಸದಾ ಧ್ವನಿಯೆತ್ತುತ್ತಿದ್ದ ವಿನೋದ್ ರವರ ಕುಟುಂಬದವರಿಗೆ ಅರ್ಥಿಕವಾಗಿ ಅನೂಕೂಲವಾಗುವ ಸಲುವಾಗಿ ಭಾರತೀಯ ಉಕ್ಕು ಪ್ರಾಧಿಕಾರದ ಉನ್ನತ ಅಧಿಕಾರಿಗಳ ಜೊತೆ ಮಾತನಾಡಿ, ಅವಲಂಬಿತರಿಗೆ ಶಾಶ್ವತ ಉದ್ಯೋಗ, ಗುತ್ತಿಗೆದಾರನ ಕಡೆಯಿಂದ ಮಾತನಾಡಿ 8 ಲಕ್ಷ ಪರಿಹಾರ ಕೊಡಿಸಿ ವೈಯಕ್ತಿಕವಾಗಿ ಹಣ ಸಹಾಯ ಮಾಡಿದ್ದಾರೆ. ಇದಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ (
ಸಿ.ಎಂ ಫಂಡ್ ನಲ್ಲಿ) ಗರಿಷ್ಠ ಹಣ ಕೊಡಿಸುವುದಾಗಿ ಶಾಸಕ ಸಂಗಮೇಶ್ವರ್ ಘೋಷಿಸಿದರು.

ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಬಿ ಎಸ್ ಗಣೇಶ್, ವಿ ಐ ಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿ. ಐ ಎಸ್ ಎಲ್ ಕಾರ್ಖಾನೆಯ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...