VISL Bhadravati ವಿ ಐ ಎಸ್ ಎಲ್ ಕಾರ್ಖಾನೆಯಲ್ಲಿ ಸೋಮವಾರ ಕ್ರೇನ್ ಮೂಲಕ ಸಾಮಗ್ರಿಗಳನ್ನು(ಬಿಲ್ಲೆಡ್) ಇಳಿಸುವ ಸಂದರ್ಭದಲ್ಲಿ ಕೇಬಲ್ ತುಂಡಾಗಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ, ಭದ್ರಾವತಿ ಗುತ್ತಿಗೆ ಕಾರ್ಮಿಕ ಸಂಘದ ಮಾಜಿ ಉಪಾಧ್ಯಕ್ಷರಾದ ಶ್ರೀ ವಿನೋದ್ ಕುಮಾರ್ ಅವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ ಸಂತಾಪ ವ್ಯಕ್ತಪಡಿದ್ದಾರೆ.
ಈ ಸಂಬಂಧ ವಿನೋದ್ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ವಿ ಐ ಎಸ್ ಎಲ್ ಕಾರ್ಖಾನೆಯ ಅಧಿಕಾರಿಗಳು ಮತ್ತು ಗುತ್ತಿಗೆ ಕಾರ್ಮಿಕರೊಂದಿಗೆ ಚರ್ಚಿಸಿ ಹಾಗೂ ಗುತ್ತಿಗೆದಾರರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮೃತ ಗುತ್ತಿಗೆ ಕಾರ್ಮಿಕರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲು ಸೂಚಿಸಿದರು.
VISL Bhadravati ಕಾರ್ಮಿಕರ ಪರವಾಗಿ ಸದಾ ಧ್ವನಿಯೆತ್ತುತ್ತಿದ್ದ ವಿನೋದ್ ರವರ ಕುಟುಂಬದವರಿಗೆ ಅರ್ಥಿಕವಾಗಿ ಅನೂಕೂಲವಾಗುವ ಸಲುವಾಗಿ ಭಾರತೀಯ ಉಕ್ಕು ಪ್ರಾಧಿಕಾರದ ಉನ್ನತ ಅಧಿಕಾರಿಗಳ ಜೊತೆ ಮಾತನಾಡಿ, ಅವಲಂಬಿತರಿಗೆ ಶಾಶ್ವತ ಉದ್ಯೋಗ, ಗುತ್ತಿಗೆದಾರನ ಕಡೆಯಿಂದ ಮಾತನಾಡಿ 8 ಲಕ್ಷ ಪರಿಹಾರ ಕೊಡಿಸಿ ವೈಯಕ್ತಿಕವಾಗಿ ಹಣ ಸಹಾಯ ಮಾಡಿದ್ದಾರೆ. ಇದಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ (
ಸಿ.ಎಂ ಫಂಡ್ ನಲ್ಲಿ) ಗರಿಷ್ಠ ಹಣ ಕೊಡಿಸುವುದಾಗಿ ಶಾಸಕ ಸಂಗಮೇಶ್ವರ್ ಘೋಷಿಸಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಬಿ ಎಸ್ ಗಣೇಶ್, ವಿ ಐ ಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿ. ಐ ಎಸ್ ಎಲ್ ಕಾರ್ಖಾನೆಯ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.
