S.N. Channabasappa ಮಹಾನಗರ ಪಾಲಿಕೆಯಲ್ಲಿ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳು ಹೀಗಿವೆ:
ಗುಂಡಿ ಮುಕ್ತ ರಸ್ತೆ: ನಗರಾದ್ಯಂತ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದ ಪ್ರಗತಿಯನ್ನು ಪರಿಶೀಲಿಸಲಾಯಿತು. ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕೂಡಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ವರದಿ ನೀಡಲು ಸೂಚಿಸಲಾಯಿತು.
ಮಳೆಗಾಲದ ಮುನ್ನೆಚ್ಚರಿಕೆ: ಮುಂಬರುವ ಮಳೆಗಾಲದ ಹಿನ್ನೆಲೆಯಲ್ಲಿ ರಾಜಕಾಲುವೆಗಳ ಹೂಳು ತೆಗೆಯುವುದು ಸೇರಿದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.
ಅಧಿಕಾರಿಗಳಿಗೆ ಎಚ್ಚರಿಕೆ: ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಮತ್ತು ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕರ್ತವ್ಯ ಲೋಪವಾದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಪಾರ್ಕಿಂಗ್ ವ್ಯವಸ್ಥೆ ಸುಧಾರಣೆ: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ವಿವಿಧೆಡೆ ಇರುವ ಕನ್ಸರ್ವೆನ್ಸಿ ರಸ್ತೆಗಳನ್ನು ತುರ್ತಾಗಿ ಅಭಿವೃದ್ಧಿಪಡಿಸಿ, ಅವುಗಳನ್ನು ವ್ಯವಸ್ಥಿತ ವಾಹನ ಪಾರ್ಕಿಂಗ್ಗಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಬೀದಿ ದೀಪ ನಿರ್ವಹಣೆ: ಪಾಲಿಕೆಯ ವಿದ್ಯುತ್ ವಿಭಾಗದ ಅಧಿಕಾರಿಗಳು ಪ್ರತಿದಿನ ವಾರ್ಡ್ಗಳಲ್ಲಿ ಸಂಚರಿಸಿ ಬೀದಿ ದೀಪಗಳ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಬೇಕು. ನಿರ್ವಹಣೆಯಲ್ಲಿ ವಿಫಲರಾದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಲಾಯಿತು.
ಕೆರೆ ಮತ್ತು ಪಾರ್ಕ್ಗಳ ಅಭಿವೃದ್ಧಿ: ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕೆರೆ ಹಾಗೂ ಉದ್ಯಾನವನಗಳ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಯ ವಿವರ ಪಡೆಯಲಾಯಿತು.
S.N. Channabasappa ನಗರೋತ್ಥಾನ ಯೋಜನೆ: NGT ಹಾಗೂ ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಯ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಯಿತು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಯಣ್ಣ ಗೌಡ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
