Saturday, May 2, 2026
Saturday, May 2, 2026

Revenue Department ಮೇ 1 & 2 ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

Date:

Revenue Department ಕಂದಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಬೆಂಗಳೂರು ಹಾಗೂ ಜಿಲ್ಲಾ ಶಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ಮೇ 01 ರ ಶುಕ್ರವಾರ ಬೆಳಿಗ್ಗೆ 8.00 ಕ್ಕೆ ರಾಜ್ಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜೆ.ಎನ್.ಎನ್.ಸಿ.ಇ, ಕಾಲೇಜು ಮೈದಾನ, ನವುಲೆ ಇಲ್ಲಿ ಏರ್ಪಡಿಸಲಾಗಿದೆ.
ಕಂದಾಯ ಇಲಾಖೆ ಸಚಿವರಾದ ಕೃಷ್ಣಬೈರೇಗೌಡ ಇವರು ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
Revenue Department ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಇವರು ಕ್ರೀಡಾ ಜ್ಯೋತಿ ಬೆಳಗಿಸುವುರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾದ ಯೋಗೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು. ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಆಯುಕ್ತಾಲಯದ ಕಂದಾಯ ಆಯುಕ್ತರು, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಮತ್ತು ಕುಂದುಕೊರತೆಗಳ ವಿಶೇಷ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಪ್ರಾದೇಶಿಕ ವಿಭಾಗದ ಆಯುಕ್ತರು, ಜಿಲ್ಲಾಧಿಕಾರಿಗಳು ಇವರ ಗೌರವ ಉಪಸ್ಥಿತಿ ಇರಲಿದೆ. ಮತ್ತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಧಿಕಾರಿಗಳು, ರಾಜ್ಯಾಧ್ಯಕ್ಷರು, ಎಲ್ಲಾ ಜಿಲ್ಲಾಧ್ಯಕ್ಷರು, ಎಲ್ಲಾ ತಾಲ್ಲೂಕು ಅಧ್ಯಕ್ಷರು, ಎಲ್ಲಾ ಹಂತದ ಪದಾಧಿಕಾರಿಗಳು ಹಾಗೂ ರಾಜ್ಯದ ಸಮಸ್ತ ಗ್ರಾಮದ ಆಡಳಿತಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Agricultural University ಕೃಷಿ ಪದವಿಗೆ ಪ್ರಾಯೋಗಿಕ ಪರೀಕ್ಷೆಯ ಅವಧಿ ವಿಸ್ತರಣೆ

Agricultural University ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳಿಗಾಗಿ ಪ್ರವೇಶ...

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ - ಬಿನಾ ಸಹಕಾರ್...