Sunday, August 2, 2026
Sunday, August 2, 2026

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು,” ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು.

ಇಂದು ವಾರ್ಡ್ ಸಂಖ್ಯೆ 8ರ ವಿನೋಬನಗರ ಬಡಾವಣೆಗೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಬಡಾವಣೆಯ ನಿವಾಸಿಗಳು ಡ್ರೈನೇಜ್ ಸಮಸ್ಯೆಯಿಂದ ಎದುರಿಸುತ್ತಿರುವ ತೊಂದರೆಯನ್ನು ಶಾಸಕರ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಶಾಸಕರು, ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್‌ಗಳಿಗೆ ಸಮಸ್ಯೆಗಳನ್ನು ಶೀಘ್ರವೇ ಸರಿಪಡಿಸಲು ಆದೇಶಿಸಿದರು.

S.N. Channabasappa ಜನಸಂಪರ್ಕದ ಮೂಲಕ ಜನರ ಸಮಸ್ಯೆಗಳನ್ನು ನೇರವಾಗಿ ತಿಳಿದು ಪರಿಹರಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಈ ವೇಳೆ ಪಾಲಿಕೆ ಅಧಿಕಾರಿಗಳು ಹಾಗೂ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...