Sunday, August 2, 2026
Sunday, August 2, 2026

Canara Bank Deshpande Orset Training Institute ಮೊಬೈಲ್ ಫೋನ್ ರಿಪೇರಿ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

Date:

Canara Bank Deshpande Orset Training Institute ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ “ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್” ತರಬೇತಿ ಆಯೋಜಿಸಲಾಗಿದ್ದು, 18 ರಿಂದ 45 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್ ಗಳ ಮೂಲಭೂತ ಜ್ಞಾನ, ಹಾರ್ಡ್ ವೇರ್ ಮತ್ತು ಸಾಫ್ಟ್ವೇರ್ ರಿಪೇರಿ, ದೋಷ ಪತ್ತೆ, ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯಗಳು ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡುತ್ತಾರೆ. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ತರಬೇತಿ ಪೂರ್ಣಗೊಂಡ ನಂತರ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಮತ್ತು ಮಾರ್ಗದರ್ಶನ ನೀಡಲಾಗುವುದು.
ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು. ಅದನ್ನು ಫೋಟೋ ತೆಗೆದು ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಕರೆ ಮಾಡಿ ಹೆಸರು ನೋಂದಣಿ ಮಾಡಬಹುದು.

ಜಾಲತಾಣ www.rsetihaliyal.org ಅರ್ಜಿ ಸಲ್ಲಿಸಬಹುದು / CBD RSETI Haliyal ವಾಟ್ಸಾಪ್ ಚಾನಲ್ ನಲ್ಲಿರುವ ಲಿಂಕ್ https://forms.gle/m4pcmpritDevbwug9 ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯು ತಿಳಿಸಿದೆ .

Canara Bank Deshpande Orset Training Institute ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕರು, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಮೊ. ಸಂ : 9483485489/8970145354 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...