Sunday, August 2, 2026
Sunday, August 2, 2026

Backward Classes Welfare Department ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ & ತರಬೇತಿಗೆ ಅರ್ಜಿ ಆಹ್ವಾನ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಂದ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಮಾಜಾಳಿ, ಕಾರವಾರದಲ್ಲಿ ನೀಡುವ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

Backward Classes Welfare Department ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಪ್ರವರ್ಗ-1 ಕ್ಕೆ ರೂ. 2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1.00 ಲಕ್ಷಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣನಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ. 45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು ಅಭ್ಯರ್ಥಿಯ ವಯಸ್ಸು 17 ರಿಂದ 20ರೊಳಗಿರಬೇಕು. ಮೇ.28 ಕ್ಕೆ ಅನ್ವಯಿಸುವಂತೆ ದಿ:28-05-2006 ರಿಂದ 28-05-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಮೇ 28 ರೊಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ನೆಲಮಹಡಿ, ಕೊಠಡಿ ಸಂಖ್ಯೆ 01, ಕಾರವಾರ 58130 ಇಲ್ಲಿಗೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...