Sunday, May 3, 2026
Sunday, May 3, 2026

Byrathi Suresh ಸಮಾಜದ ಕಟ್ಟಕಡೆ ವ್ಯಕ್ತಿಗೂ ಮೂಲಭೂತ ಸೌಕರ್ಯಗಳ ಸೌಲಭ್ಯ – ಸಚಿವ ಭೈರತಿ ಸುರೇಶ್.

Date:

Byrathi Suresh ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯಗಳನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು‌ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿದ್ದು ಪ್ರತಿ ಮಹಾನಗರಪಾಲಿಕೆಗಳ ಅಭಿವೃದ್ಧಿ ಯೋಜನೆಗಳಿಗೆ ನಗರಾಭಿವೃದ್ದಿ ಇಲಾಖೆಯು ರೂ.200 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ತಿಳಿಸಿದರು.
ಬೊಮ್ಮನಕಟ್ಟೆ ‘ಬಿ’ ಬ್ಲಾಕ್ ನಲ್ಲಿ ಶಿವಮೊಗ್ಗ ಮಹಾನಗರಪಾಲಿಕೆಯ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (ಹಂತ-2), ಎನ್.ಜಿ.ಟಿ. ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಮಾಜಿ ಮುಖ್ಯಮಂತ್ರಿ ದಿ|| ಶ್ರೀ ಎಸ್. ಬಂಗಾರಪ್ಪ ಬಡಾವಣೆಯ ನಾಮಕರಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದೇವೆ.‌ ಜಾತ್ಯಾತೀತ, ಪಕ್ಷಾತೀತವಾಗಿ ಎಲ್ಲರಿಗೂ ಜನಪರವಾದ ಯೋಜನೆಗಳನ್ನು ನೀಡುತ್ತಿದ್ದೇವೆ. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ೪ ಲಕ್ಷದ ೫೬ ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2) ಯಡಿ ಸುಮಾರು ರೂ. 127.5 ಕೋಟಿ ವೆಚ್ಚದ ಕಾಮಗಾರಿಗೆ ಇಂದು ಚಾಲನೆ ನೀಡಿದ್ದು
ಮುಂದಿನ ೨೦ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.
ನಗರದ ಕುಡಿಯುವ ನೀರಿನ ಯೋಜನೆ ಕುರಿತು ಸಚಿವರು, ಶಾಸಕ ರೊಂದಿಗೆ ಚರ್ಚಿಸಿ ಸಮಗ್ರ ಕುಡಿಯುವ ನೀರಿನ‌ ಯೋಜನೆಗೆ ಹಂತ ಹಂತವಾಗಿ ಹಣ ಮಂಜೂರು ಮಾಡುವ ಮೂಲಕ ಯೋಜನೆಯನ್ನು ಸಾಕಾರಗೊಳಿಸಲು ಕಟಿಬದ್ದರಾಗಿದ್ದೇವೆಂದು ಭರವಸೆ ನೀಡಿದ ಅವರು ಪೌರ ಕಾರ್ಮಿಕರ ವಸತಿ ಯೋಜನೆಯಡಿ ಬಾಕಿ‌ ಕಾಮಗಾರಿಗೆ ಅಗತ್ಯವಾದ ಅನುದಾನ ಕೊಡಿಸಲು ಭರವಸೆ ನೀಡಿದರು.ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು‌ ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು‌ ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ.ಭೈರತಿ ಸುರೇಶ್, ಸಚಿವರು, ನಗರಾಭಿವೃದ್ಧಿ ಮತ್ತು ನಗರ ಯೋಜನೆ

ಕೆರೆಯ ನೀರನ್ನು ಕೆರೆಗೆ ಚೆಲ್ಲು ಎಂಬಂತೆ ನಿಮ್ಮ‌ಹಣದಿಂದಲೇ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳೊಂದಿಗೆ ಒತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ.ಯುಬಿಐಡಿ ಪ್ರಕಾರ ಪ್ರತಿ ತಿಂಗಳು ಜೀವನ ನಡೆಸಲು ಅಗತ್ಯವಾದ ಆರ್ಥಿಕ ಸಹಾಯ ಒದಗಿಸುತ್ತಿರುವ ಸರ್ಕಾರ ಇಡೀ ಪ್ರಪಂಚದಲ್ಲೇ ನಮ್ಮದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಮಾತನಾಡಿ, ಬಡಜನರ ಕಲ್ಯಾಣಕ್ಕಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಸ್. ಬಂಗಾರಪ್ಪ ಅವರ ಹೆಸರನ್ನು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಗೆ ನಾಮಕರಣ ಮಾಡಬೇಕೆಂದು
2016 ರಿಂದ ಪಕ್ಷಾತೀತವಾದ ಬೇಡಿಕೆ ಇತ್ತು. ಇಂದು ಅದು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗಿದೆ. ಬಡವರ ಉದ್ದಾರದ ಬಂಗಾರಪ್ಪನವರ ಕನಸನ್ನು ಸರ್ಕಾರಗಳು ನನಸು ಮಾಡುತ್ತಾ ಬಂದಿದೆ.
ಬಂಗಾರಪ್ಪನವರು ಜಾರಿಗೆ ತಂದ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಗೆ ರೂ. ೨೦ ಸಾವಿರ ಕೋಟಿ ಅನುದಾನ ಸರ್ಕಾರ ನೀಡುತ್ತಿದೆ.
ಗ್ರಾಮೀಣ ಭಾಗದ ಯುವಜನತೆಯನ್ನು ಮುಂದೆ ತರಲು, ಉತ್ತಮ ಅವಕಾಶ ನೀಡಲು ೧೫% ಗ್ರಾಮೀಣ ಕೃಪಾಂಕ ಯೋಜನೆಯನ್ನು ನಾವೆಲ್ಲ ಸ್ಮರಿಸುತ್ತಿದ್ದೇವೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರು ವಾಸಿಸುವ ಪ್ರದೇಶಗಳಲ್ಲಿ ಪ್ರಾರ್ಥನಾ ಮಂದಿರಗಳು ಹಾಗೂ ಪೂಜಾ ಸ್ಥಳಗಳನ್ನು ನಿರ್ಮಿಸಲು ಮತ್ತು ಜೀರ್ಣೋದ್ಧಾರ ಮಾಡಲು ಆರ್ಥಿಕ ನೆರವು ನೀಡುವ ಆರಾಧನಾ ಯೋಜನೆ ಜಾರಿಗೆ ತಂದು ಎಲ್ಲರಿಗೂ ಸಮಾನ ಅವಕಾಶ ನೀಡಿದರೆಂದು ಸ್ಮರಿಸಿದರು.
ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವ್ಯವಸ್ಥಿತವಾದ ಕ್ರಿಯಾ ಯೋಜನೆ ಸಿದ್ದಪಡಿಸಿದ್ದು, ಈ ಯೋಜನೆಯನ್ನು ಮಂಜೂರು ಮಾಡಬೇಕೆಂದು ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದರು.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2) ಯಡಿ ಸುಮಾರು ರೂ. 127.5 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಆಗಿದೆ.ಎನ್.ಜಿ.ಟಿ ಅನುದಾನದಡಿ ರೂ. 40 ಕೋಟಿ ವೆಚ್ಚದಲ್ಲಿ ತುಂಗಾ ನದಿಯ ಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Byrathi Suresh ಆರಾಧನಾ, ಅಕ್ಷಯ, ಆಶ್ರಯ ಯೋಜನೆಗಳನ್ನು ನೀಡಿದ ಬಡವರ ನಾಯಕ ಬಂಗಾರಪ್ಪನವರನ್ನು ನಾವು ಮರೆಯುವ ಹಾಗಿಲ್ಲ. ಜಿಲ್ಲೆಯ ಕುಡಿಯುವ ನೀರಿಗೆ ಎಲ್ಲ ಮುಖ್ಯಮಂತ್ರಿಗಳು ಸಹಕರಿಸಿದ್ದಾರೆ. ಪ್ರಸ್ತುತ ಬೆಳೆಯುತ್ತಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ ರೂ. ೪೯೦ ಕೋಟಿ ಅವಶ್ಯಕತೆ ಇದ್ದು, ಕ್ರಿಯಾ ಯೋಜನೆ ತಯಾರಿಸಿದ್ದು ನಗರಾಭಿವೃದ್ಧಿ ಸಚಿವರು ಈ ಬಗ್ಗೆ ಭರವಸೆ ನೀಡಿದ್ದಾರೆ. ಹಾಗೂ ಪೌರ ಕಾರ್ಮಿಕರಿಗೆ ವಸತಿ ಯೋಜನೆಯ ಬಾಕಿ ಕಾಮಗಾರಿಗಳಿಗೆ ಅವಶ್ಯವಿರುವ ರೂ. ೨೭ ಕೋಟಿ ಅನುದಾನ ನೀಡಬೇಕೆಂದು‌ ಮನವಿ ಮಾಡುತ್ತೇನೆ.-ಎಸ್ ಎನ್ ಚನ್ನಬಸಪ್ಪ, ಶಾಸಕರು

ಬಡವರಿಗಾಗಿ‌ ಆರಾಧನಾ, ಆಶ್ರಯ, ಬಗರ್ ಹುಕುಂ, ಗ್ರಾಮೀಣ ಕೃಪಾಂಕ, ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಹೀಗೆ ಹಲವಾರು ಯೋಜನೆ ನೀಡಿದ ಮಾಜಿ‌ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪನವರು ನನ್ನಂತಹ ಯುವ ನಾಯಕರನ್ನು ಸಹ ಬೆಳೆಸಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿ ಕೈಗೊಂಡಿದೆ.-ಗೋಪಾಲಕೃಷ್ಣ ಬೇಳೂರು, ಶಾಸಕರು.

ಬಡವರ ಬಂಧು ಬಂಗಾರಪ್ಪನವರು ನೀಡಿರುವ ಕೊಡುಗೆಗಳು, ಕೆಲಸಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ, ಬಗರ್ ಹುಕುಂ‌ ಸಮಿತಿ‌ ರಚನೆ ಸೇರಿದಂತೆ ಹಲವಾರು ಜನಪರ, ಬಡವರಪರವಾದ ಯೋಜನೆಗಳನ್ನು ಬಂಗಾರಪ್ಪನವರು ನೀಡಿರುವುದು ಅತ್ಯಂತ ಅನುಕೂಲವಾಗಿದೆ.- ಶಾರದಾ ಪೂರ್ಯಾನಾಯ್ಕ್, ಶಾಸಕರು

ಇತಿಹಾಸ ತಿಳಿಯದೆ ಭವಿಷ್ಯ ಕಟ್ಟಲು ಸಾಧ್ಯವಿಲ್ಲ. ಆದ್ದರಿಂದ ಮಾಜಿ ಸಚಿವರಾದ ದಿ.ಎಸ್.ಬಂಗಾರಪ್ಪನವರವ ಕೊಡುಗೆಗಳ ಬಗ್ಗೆ ತಿಳಿಯಬೇಕಿದೆ. ಶಿವಮೊಗ್ಗ ನಗರದಲ್ಲಿ ಸ್ಲಂಗಳ ಅಭಿವೃದ್ದಿ ಆಗಬೇಕು.ಬಲ್ಕೀಶ್ ಬಾನು, ವಿಧಾನ ಪರಿಷತ್ ಶಾಸಕರು

ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಪಾಲಿಕೆ ತೆರಿಗೆ ವ್ಯವಸ್ಥೆ ಸರಳೀಕರಣ ಮಾಡಿ, ರಿಯಾಯಿತಿ ನೀಡಬೇಕು.ಡಿ.ಎಸ್ ಅರುಣ್, ವಿಧಾನ ಪರಿಷತ್ ಶಾಸಕರು

ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ರಾಜ್ಯ ಎಸ್ ಸಿ/ಎಸ್ ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ,
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್,
ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಡಿಸಿ ಅಭಿಷೇಕ್ ವಿ, ಡಿಯುಡಿಸಿ ಯೋಜನಾ ನಿರ್ದೇಶಕ ರಂಗಸ್ವಾಮಿ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಕೆ, ಇತರೆ ಮುಖಂಡರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...

Blood Donation camp ದೊಡ್ಡಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ರಕ್ತದಾನ ಶಿಬಿರ.

Blood Donation camp ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಅಂಬೇಡ್ಕರ್...