Monday, July 27, 2026
Monday, July 27, 2026

S.N. Channabasappa ಶಿವಮೊಗ್ಗದಲ್ಲಿ ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ಟೆಕ್ನಿಕಲ್ ಎಫರ್ಟ್ಸ್ ನಿವಾರಣೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಪ್ರಯತ್ನ

Date:

S.N. Channabasappa ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ಹಾಗೂ ಶುದ್ಧೀಕರಣ ಪ್ರಕ್ರಿಯೆಯಲ್ಲಿ ಕಂಡುಬರುತ್ತಿರುವ ತಾಂತ್ರಿಕ ಅಡಚಣೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ತೀರ್ಥಹಳ್ಳಿ ರಸ್ತೆಯ ನೀರಿನ ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕರು, “ನಗರದ ಕುಡಿಯುವ ನೀರಿನ ಬೇಡಿಕೆ ಹೆಚ್ಚುತ್ತಿದ್ದು, ಹಾಲಿ ಇರುವ ಘಟಕದ ಮೇಲೆ ಒತ್ತಡ ಹೆಚ್ಚಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇತ್ತೀಚೆಗೆ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ಅವರನ್ನು ಭೇಟಿ ಮಾಡಿ, ಶಿವಮೊಗ್ಗಕ್ಕೆ ಮತ್ತೊಂದು ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಮಂಜೂರು ಮಾಡುವಂತೆ ಅಧಿಕೃತ ಮನವಿ ಸಲ್ಲಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯನ್ನು ತ್ವರಿತವಾಗಿ ಅನುಮೋದನೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ,” ಎಂದು ತಿಳಿಸಿದರು.

S.N. Channabasappa ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು. ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...